ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಿರ್ವ ಭಾಗದಲ್ಲಿ ಲೇಬರ್ ಕಾರ್ಡ್ ವಿತರಿಸಿದ ಸಮಾಜ ಸೇವಕ ಪವನ್ ಕುಮಾರ್

Posted On: 12-06-2020 10:30PM

ಶಿರ್ವ ಮಂಚಕಲ್ಲಿನ ತೊಟ್ಲಗುರಿ ಜನರಿಗೆ ಹಾಗೂ ಬಂಟಕಲ್ಲಿನ ಅರಸಿಕಟ್ಟೆಯಲ್ಲಿ ಕೂಲಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರಿಗೆ ಸಮಾಜ ಸೇವಕ ಪವನ್ ಕುಮಾರ್ ಅವರು "Labour card" ವಿತರಿಸಿದರು.. ತೊಟ್ಲಗುರಿಯಲ್ಲಿ ಸುಮಾರು 100 ಮನೆಗಳಿದ್ದು ಇಲ್ಲಿನ ಜನರಿಗೆ ಸಹಾಯ ಮಾಡುವ ದೃಷ್ಟಿಯಿಂದ ಕೂಲಿ ಕೆಲಸ ಮಾಡುವ ಜನರಿಗೆ "labour card" ಮಾಡಲು ಬೇಕಾಗುವ ದಾಖಲೆಯನ್ನು ಸ್ವೀಕರಿಸಿ ಕ್ಲಪ್ತ ಸಮಯಲ್ಲಿ ಅವರಿಗೆ "Labour card"ಅನ್ನು ವಿತರಿಸಿದರು. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಮಾಜ ಸೇವಕ ಪವನ್ ಕುಮಾರ್ ಅವರು ಕೂಲಿ ಕಾರ್ಮಿಕರಿಗೆ "Labour card" ಮಾಡುವುದರಿಂದ ಅನೇಕ ಸರಕಾರದ ಸವಲತ್ತುಗಳು ದೊರೆಯುತ್ತದೆ. ತಂದೆ ತಾಯಿಗಳು ಮಾಡುವ "labour card" ನಿಂದಾಗಿ ಮಕ್ಕಳ ವಿದ್ಯಾಭಾಸಕ್ಕಾಗಿ ಹಾಗೂ ಮಕ್ಕಳ ಮುಂದಿನ ಭವಿಷ್ಯಕ್ಕೆ ಸಹಾಯವಾಗುತ್ತದೆ. ಯಾವುದೇ ಅನಾಹುತ ಆದ ಸಂದರ್ಭದಲ್ಲಿ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು, ಮಕ್ಕಳು ಒಳ್ಳೆಯ ಅಂಕವನ್ನು ಗಳಿಸಿದರೆ ಮಕ್ಕಳಿಗೆ ವಿದ್ಯಾರ್ಥಿ ವೇತನ ದೊರೆಯಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು..