ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಿರ್ವ : ದಶದಿಕ್ಕುಗಳಿಂದ ಸಂಪತ್ತು ಹರಿದು ಬರಲಿ - ಉಮೇಶ್ ಆಚಾರ್ಯ

Posted On: 21-09-2022 03:04PM

ಶಿರ್ವ : ಶ್ರೀ ವಿಶ್ವಬ್ರಾಹ್ಮಣ ಯುವ ಸಂಗಮ ಶಿರ್ವ ಮತ್ತು ಮಹಿಳಾ ಬಳಗದ ವತಿಯಿಂದ ಕುತ್ಯಾರು ಶ್ರೀಮಠದ ಗೋವುಗಳಿಗೆ ಸುಮಾರು ಇನ್ನೂರು ಕಿಲೋ ಗಿಂತಲೂ ಹೆಚ್ಚು ಹಿಂಡಿ ಮತ್ತು ಹಸಿರು ಆಹಾರವನ್ನು ಅಧ್ಯಕ್ಷರಾದ ಉಮೇಶ್ ಆಚಾರ್ಯರು ಗೋಮಾತೆಗೆ ಸಮರ್ಪಿಸಿ ದಶದಿಕ್ಕುಗಳಿಂದ ನಮ್ಮ ಸಂಸ್ಥೆಗೆ ಸಂಪತ್ತು ಹರಿದುಬರಲಿ ಇನ್ನೂ ಮುಂದಕ್ಕೂ ಗೋಸೇವೆ ಸೇವೆ ಮಾಡುವ ಅವಕಾಶ ದೊರೆಯಲಿ ಎಂದು ಮಠಕ್ಕೆ ಗೋವಿಗಾಗಿ ಮೇವು ಸಮರ್ಪಣ ಸಮಾರಂಭದಲ್ಲಿ ನುಡಿದರು ಶ್ರೀಮಠದ ಗುರುಗಳು ಸದಸ್ಯರಿಗೆ ಫಲಮಂತ್ರಾಕ್ಷತೆ ಯನ್ನು ನೀಡಿ ಸಂಸ್ಥೆ ಉತ್ತರೋತ್ತರ ಅಭಿವೃದ್ಧಿಯಾಗಲಿ, ಗುರು ಆಶೀರ್ವಾದದೊಂದಿಗೆ ಗೋಮಾತೆಯ ಆಶೀರ್ವಾದ ಎಲ್ಲರಿಗೂ ಲಭಿಸಲಿ ಎಂದು ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಮಠದ ಪರಿಯಾವರಣ ಅಧ್ಯಕ್ಷರಾದ ಸುಂದರ್ ಆಚಾರ್ಯ ಬೆಳುವಾಯಿ, ಕಾರ್ಯದರ್ಶಿ ಸುರೇಶ್ ಉಡುಪಿ, ಶ್ರೀಮಠದ ಲೋಲಾಕ್ಷ ಆಚಾರ್ಯ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ದಶಮಾನೋತ್ಸವದ ಸಂಚಾಲಕ ಪ್ರಶಾಂತ ಆಚಾರ್ಯ ಮತ್ತು ಪ್ರಿತಮ್ ಆಚಾರ್ಯ ಇವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಸುರೇಶಾಚಾರ್ಯ ಮಹಿಳಾ ಬಳಗದ ಅಧ್ಯಕ್ಷೆ ಸುಮತಿ ಭಾಸ್ಕರಾಚಾರ್ಯ ಕಾರ್ಯದರ್ಶಿ ಪ್ರೀತಿ ಉಮೇಶ್ ಆಚಾರ್ಯ ಮತ್ತು ಎಲ್ಲಾ ಸದಸ್ಯರು ಭಾಗವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಮಾಧವಾಚಾರ್ಯ ವಂದಿಸಿದರು.