ಉಡುಪಿ :- ವಿಶ್ವ ರಕ್ತದಾನಿಗಳ ದಿನಾಚರಣೆ ಇದರ ಪ್ರಯುಕ್ತ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಉಡುಪಿ ಜಿಲ್ಲೆ ಕುಂದಾಪುರದಲ್ಲಿ ಹಮ್ಮಿಕೊಂಡ ಕಾಯ೯ಕ್ರಮದಲ್ಲಿ "ರಕ್ತದಾನ ಪುರಸ್ಕಾರ". ಗೌರವವನ್ನು ರಕ್ತದಾನಿ ರಾಘವೇಂದ್ರ ಪ್ರಭು,ಕವಾ೯ಲು ಸಹಿತ 5 ಜನರಿಗೆ ಪ್ರಧಾನ ಮಾಡಲಾಯಿತು.ಕಾಯ೯ಕ್ರಮದಲ್ಲಿ ಮಾತನಾಡಿದ ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತ ಕೆ.ರಾಜು, ರಕ್ತದಾನಕ್ಕಿಂತ ಮಿಗಿಲಾದ ದಾನ ಬೇರೆ ಯಾವುದೂ ಇಲ್ಲ ಒಂದು ರಕ್ತದಾನ 3 ಜನರಿಗೆ ಸಹಾಯಕವಾಗಬಹುದು ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವಂತೆ ಕರೆ ನೀಡಿದರು.ಖ್ಯಾತ ವೈದ್ಯ ಡಾII ಉಮೇಶ್ ಪುತ್ರನ್, ಭಾರತೀಯ ವೈದ್ಯ ಸಂಘದ ಅಧ್ಯಕ್ಷೆ ಡಾ|| ಶ್ರೀದೇವಿ ಕಟ್ಟೆ, ಕುಂದಾಪುರ ತಾಲೂಕು ವೈದ್ಯಾಧಿಕಾರಿ ಡಾ" ನಾಗಭೂಷಣ್ ಉಡುಪ, ರೆಡ್ ಕ್ರಾಸ್ ಸಭಾಪತಿ ಜಯಕರ ಶೆಟ್ಟಿ ಮುಂತಾದವರಿದ್ದರು.ನಂತರ ರಕ್ತದಾನ ಶಿಬಿರ ನಡೆಯಿತು.ಸುಮಾರು 80 ಜನರು ರಕ್ತದಾನ ಮಾಡಿದರು.