ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕುತ್ಯಾರು : 'ಇಂದ್ರಪುರ ಅಂಗನವಾಡಿ' ಗೆ ಕುಡಿಯುವ ನೀರಿನ ಯಂತ್ರ ನೀಡಿದ ಪವನ್ ಕುಮಾರ್

Posted On: 14-06-2020 09:01PM

ಶಿರ್ವ ಮಂಚಕಲ್ಲಿನ ಕುತ್ಯಾರು ರಸ್ತೆಯಲ್ಲಿರುವ "ಇಂದ್ರಪುರ ಅಂಗನವಾಡಿ" ಕೇಂದ್ರಕ್ಕೆ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸಮಾಜ ಸೇವಕ ಪವನ್ ಕುಮಾರ್ ಅವರು ಸುಮಾರು 8000 ರೂಪಾಯಿ ಮೌಲ್ಯದ ಕುಡಿಯುವ ನೀರಿನ ಯಂತ್ರವನ್ನು ನೀಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ಪವನ್ ಕುಮಾರ್ ಅವರು ಕರೋನದಿಂದ ಜನರು ಕಂಗಾಲಾಗಿದ್ದು, ಆರೋಗ್ಯದ ಕಡೆ ತುಂಬಾ ಜಾಗ್ರತೆಯನ್ನು ವಹಿಸುತ್ತಾರೆ. ಅದರಲ್ಲೂ ಮುಖ್ಯವಾಗಿ ಮಕ್ಕಳು. ಆದ ಕಾರಣ ಮಕ್ಕಳ ಆರೋಗ್ಯ ದೃಷ್ಟಿಯಿಂದ ಕುಡಿಯುವ ನೀರಿನ ಯಂತ್ರವನ್ನು ನೀಡಿರುತ್ತೆನೆಂದು ತಿಳಿಸಿದರು.. ಈ ಸಂಧರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಸುನಿತಾ ಪೂಜಾರಿ ಹಾಗೂ ಸಹಾಯಕಿ ಪ್ರಭಾ ಅವರು ಉಪಸ್ಥಿತರಿದ್ದರು.. ಪವನ್ ಅವರ ಈ ಕಾರ್ಯಕ್ಕೆ ಶಿಕ್ಷಕರು ಪ್ರಸಂಶಿದರು.