ಕಟಪಾಡಿ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪಕ ಸದಸ್ಯರಾಗಿ, ಸಂಘದ ಪ್ರಚಾರ ಕರಾಗಿ,ಜನಸಂಘದ ಸ್ಥಾಪನೆಗೆ ಕಾರಣಿಕರ್ತರಾಗಿ ನಂತರ ಅಖಂಡ ಭಾರತದ ನಿರ್ಮಾಣಕ್ಕಾಗಿ ಶ್ರಮಿಸಿ ಹಿಂದುತ್ವ ಸಿದ್ದಾಂತವನ್ನು ಪ್ರತಿಪಾದಿಸಿದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರವರ 106 ನೇ ಜನ್ಮದಿನದ ಪ್ರಯುಕ್ತ ನುಡಿ ನಮನ ಕಾರ್ಯಕ್ರಮವು ಹಿಂದೂ ಯುವಸೇನೆ ಶ್ರೀ ದುರ್ಗಾಪರಮೇಶ್ವರಿ ಘಟಕ ಅಗ್ರಹಾರ ಕಟಪಾಡಿ ಇವರ ವತಿಯಿಂದ ಸಂಘದ ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಹಿರಿಯ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರಾದ ಹರಿಶ್ಚಂದ್ರ ಕೋಟ್ಯಾನ್, ವಾಸು ಪೂಜಾರಿ, ಮಾಜಿ ಪಂಚಾಯತ್ ಸದಸ್ಯರಾದ ಶ್ರೀಧರ್ ಮಾಬ್ಯಾನ್, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.