ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ನೇತೃತ್ವದಲ್ಲಿ ನವೆಂಬರ್ 27 ರಂದು ಜರಗಲಿರುವ ಹಿಂದೂ ಸಮಾಜೋತ್ಸವದ ಕಾರ್ಯಾಲಯ ಉಧ್ಘಾಟನೆ ಇಂದು ನಡೆಯಿತು.
ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ಕಾರ್ಯಾಲಯ ಉದ್ಘಾಟನೆ ಮಾಡಿದರು.ವಿಶ್ವ ಹಿಂದೂ ಪರಿಷದ್ ಮಟ್ಟಾರು ಘಟಕ ಉಪಾಧ್ಯಕ್ಷ ಜಗದೀಶ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.
ಬಜರಂಗದಳ ಉಡುಪಿ ಜಿಲ್ಲಾ ಸಂಚಾಲಕ ಸುರೇಂದ್ರ ಕೋಟೇಶ್ವರ,ವಿಶ್ವ ಹಿಂದೂ ಪರಿಷದ್ ಕಾಪು ಪ್ರಖಂಡ ಧರ್ಮಾಚಾರ್ಯ ಪ್ರಮುಖ್ ವೇದಮೂರ್ತಿ ಪ್ರಸನ್ನ ಭಟ್, ಶಿರ್ವ ವಲಯ ಅಧ್ಯಕ್ಷ ವಿಖ್ಯಾತ್ ಭಟ್, ಮಟ್ಟಾರು ಘಟಕ ಬಜರಂಗದಳ ಸಹಸಂಚಾಲಕ ಮಂಜುನಾಥ ನಾಯಕ್, ಮಾತೃಶಕ್ತಿ ಪ್ರಮುಖ್ ಸುಲೋಚನಾ ಆಚಾರ್ಯ, ಸಹಪ್ರಮುಖ್ ಲಲಿತಾ ಶೆಟ್ಟಿ,ದುರ್ಗಾವಾಹಿನಿ ಸಹಸಂಚಾಲಕಿ ರಾಜಶ್ರೀ ಪೂಜಾರಿ, ಕಾರ್ಯಾಲಯ ಪ್ರಮುಖ್ ಸಂಪತ್ ರಾವ್, ಶಿರ್ವ ಸಹಕಾರಿ ವ್ವವಸಾಯಿಕ ಸಂಘದ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ, ಶಿರ್ವ ಗ್ರಾಮ ಪಂಚಾಯತ್ ಸದಸ್ಯರಾದ ದೇವದಾಸ ನಾಯಕ್, ಶ್ರೀನಿವಾಸ ಶೆಣೈ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಶ್ವ ಹಿಂದೂ ಪರಿಷದ್ ಕಾಪು ಪ್ರಖಂಡ ಅಧ್ಯಕ್ಷ ಜಯಪ್ರಕಾಶ್ ಪ್ರಭು ಸ್ವಾಗತಿಸಿ,ರಂಜಿತ್ ಶೆಟ್ಟಿ ವಂದಿಸಿದರು.