ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಟಪಾಡಿ : ದುರ್ಗಾದೌಡ್ ಕಾರ್ಯಕ್ರಮದ ಪೂರ್ವಭಾವಿ ಸಭೆ

Posted On: 27-09-2022 10:37AM

ಕಟಪಾಡಿ : ಹಿಂದು ಜಾಗರಣ ವೇದಿಕೆ ಉಡುಪಿ ಜಿಲ್ಲೆಯ ನೇತೃತ್ವದಲ್ಲಿ ಅಕ್ಟೋಬರ್ 2 ರಂದು ನಡೆಯಲಿರುವ ಬೃಹತ್ ದುರ್ಗಾದೌಡ್ ಕಾರ್ಯಕ್ರಮದ ಪೂರ್ವಭಾವಿಯಾಗಿ ಸಮಾಲೋಚನ ಸಭೆಯು ಕಟಪಾಡಿ ಅಗ್ರಹಾರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಜರಗಿತು.

ಈ ಸಂದರ್ಭದಲ್ಲಿ ಹಿಂದೂಜಾಗರಣ ವೇದಿಕೆಯ ಗುರುಪ್ರಸಾದ್ ಸೂಡ, ರಕ್ಷಿತ್ ಕಡಂಬು , ಅಗ್ರಹಾರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವೈ ಭರತ್ ಹೆಗ್ಡೆ, ಹಿಂದೂಯುವಸೇನೆ ಶ್ರೀ ದುರ್ಗಾಪರಮೇಶ್ವರಿ ಘಟಕ ಅಗ್ರಹಾರ ಕಟಪಾಡಿ ಇದರ ಪದಾಧಿಕಾರಿಗಳು , ನವೋದಯ ಸಂಘ ದುರ್ಗಾನಗರ ಇದರ ಪದಾಧಿಕಾರಿಗಳು , ಸದಸ್ಯರು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.