ಪಡುಬಿದ್ರಿ : ವಿಷ ಜಂತು ಕಚ್ಚಿ ವಿಷವು ವಿಪರೀತವಾಗಿ ಏರಿ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸೆಪ್ಟೆಂಬರ್ 26 ರಂದು ಪಡುಬಿದ್ರಿಯ ಅಬ್ಬೇಡಿ ಎಂಬಲ್ಲಿ ನಡೆದಿದೆ.
ಮೃತ ವ್ಯಕ್ತಿ ರಾಮ ದೇವಾಡಿಗ (60) ಗದ್ದೆಯಲ್ಲಿ ಹುಲ್ಲು ತೆಗೆಯುತ್ತಿರುವಾಗ ಅವರ ಕೈ ಬೆರಳಿಗೆ ಯಾವುದೋ ವಿಷ ಜಂತು ಕಚ್ಚಿದ್ದು, ಮನೆಗೆ ಬಂದು ಸಹೋದರಿಯರಲ್ಲಿ ತಿಳಿಸಿದ್ದು ಕೂಡಲೇ ಅವರು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದರು. ವಿಷವು ವಿಪರೀತವಾಗಿ ಏರುತ್ತಿದ್ದು, ಕೂಡಲೇ ಹೆಚ್ಚಿನ ಚಿಕಿತ್ಸೆಗೆ ಮುಕ್ಕದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿಸಿದಂತೆ ಕರೆದುಕೊಂಡು ಹೋಗಿ ವೈದ್ಯರು ಚಿಕಿತ್ಸೆ ನೀಡುತ್ತಿರುವಾಗ ಮೃತಪಟ್ಟಿರುತ್ತಾರೆ.
ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.