ಪಡುಬಿದ್ರಿ : 2 ನೇ ವರ್ಷದ ಕಂಚಿನಡ್ಕ - ನಂದ್ಯೂರಮ್ಮನಡೆಗೆ ನಮ್ಮ ನಡೆ ಪಾದಯಾತ್ರೆ ಸಂಪನ್ನ
Posted On:
03-10-2022 02:35PM
ಪಡುಬಿದ್ರಿ : ಶರನ್ನವರಾತ್ರಿ ಸಂದರ್ಭದಲ್ಲಿ ಪಡುಬಿದ್ರಿಯ ಕಂಚಿನಡ್ಕದ ಹಿಂದೂ ಬಾಂಧವರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ಅಕ್ಟೋಬರ್ 2 ರಂದು ಕಂಚಿನಡ್ಕದಿಂದ ನಂದಿಕೂರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಯಿತು.
ಹಿರಿಯರಾದ ಮೊನಪ್ಪ, ಸುಂದರ್, ಕೃಷ್ಣ ಬಂಗೇರರವರು ದೀಪ ಪ್ರಜ್ವಲಿಸಿ, ದೇವಿ ಮಹಾತ್ಮೆಯಲ್ಲಿ ಉಚ್ಚರಿಸಲ್ಪಟ್ಟ ಸಪ್ತಶ್ಲೋಕದ ವಿಶೇಷ ಮಂತ್ರ ಪಾರಾಯಣದೊಂದಿಗೆ ಚಾಲನೆ ನೀಡಲಾಯಿತು. ಪಾದಯಾತ್ರೆಯಲ್ಲಿ ಸುರೇಶ್ ತಂಡದಿಂದ ಭಜನಾ ಸಂಕೀರ್ತನೆ ನಡೆಯಿತು.
ನಂದಿಕೂರು ದೇವಳದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ಮದ್ವರಾಯ ಭಟ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಇವರ ಉಪಸ್ಥಿತಿಯಲ್ಲಿ ಪಾದಯಾತ್ರಿಗಳಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ವಿತರಿಸಿದರು. ಸುಮಾರು ನೂರಕ್ಕೂ ಅಧಿಕ ಮಂದಿ ಪಾದಯಾತ್ರಿಗಳು ಭಾಗವಹಿಸಿದ್ದರು.