ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ನವೆಂಬರ್ 27 ರಂದು ಜರಗಲಿರುವ ಹಿಂದೂ ಸಮಾಜೋತ್ಸವದ ಪ್ರಚಾರದ ವೀಡಿಯೊ ತುಣುಕು ಬಿಡುಗಡೆ

Posted On: 03-10-2022 03:13PM

ಉಡುಪಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ನೇತೃತ್ವದಲ್ಲಿ ನವೆಂಬರ್ 27 ರಂದು ಜರಗಲಿರುವ ಹಿಂದೂ ಸಮಾಜೋತ್ಸವದ ಪ್ರಚಾರದ ವೀಡಿಯೊ ತುಣುಕು ಬಿಡುಗಡೆ ಸೋಮವಾರ ನಡೆಯಿತು.

ಬಂಟಕಲ್ಲು ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶಶಿಧರ ವಾಗ್ಳೆಯವರು ಹಿಂದೂ ಸಮಾಜೋತ್ಸವದ ಪ್ರಚಾರದ ವೀಡಿಯೊ ಬಿಡುಗಡೆ ಮಾಡಿದರು.

ವಿಶ್ವ ಹಿಂದೂ ಪರಿಷದ್ ಮಟ್ಟಾರು ಕಾರ್ಯದರ್ಶಿ ಸತೀಶ ಆಚಾರ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿಯಾದ ಸಂದೀಪ್ ಶೆಟ್ಟಿ ನಾಲ್ಕುಬೀದಿ, ಶಿರ್ವ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ವಾರಿಜಾ ಪೂಜಾರಿ, ಶಿರ್ವ ಗ್ರಾಮ ಪಂಚಾಯತ್ ಸದಸ್ಯರಾದ ಆಶಾ ಆಚಾರ್ಯ, ಬಜರಂಗದಳ ಕಾಪು ಪ್ರಖಂಡ ಸುರಕ್ಷಾ ಪ್ರಮುಖ್ ಆನಂದ, ವಿಶ್ವ ಹಿಂದೂ ಪರಿಷದ್ ಮಟ್ಟಾರು ಸೇವಾ ಪ್ರಮುಖ್ ಸತೀಶ್, ಪ್ರಚಾರ ಮತ್ತು ಸಾಮಾಜಿಕ ಜಾಲತಾಣ ಪ್ರಮುಖ್ ಪ್ರವೀಣ್ ಪೂಜಾರಿ, ಬಜರಂಗದಳ ಸುರಕ್ಷಾ ಪ್ರಮುಖ್ ಅಭಿಜಿತ್ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಯಪ್ರಕಾಶ್ ಪ್ರಭು ಕಾರ್ಯಕ್ರಮ ನಿರೂಪಿಸಿದರು.