ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ವಿಶ್ವ ಹಿಂದೂ ಪರಿಷದ್ ಭಜರಂಗದಳ ಮಾತೃಶಕ್ತಿ, ದುರ್ಗಾವಾಹಿನಿ ಮೂಡುಬೆಳ್ಳೆ : 15ನೇ ವರ್ಷದ ಸತ್ಯನಾರಾಯಣ ಪೂಜೆ, ಶಾರದಾ ಪೂಜೆ, ಚಂಡಿಕಾಯಾಗ

Posted On: 06-10-2022 11:18AM

ಕಾಪು : ವಿಶ್ವ ಹಿಂದೂ ಪರಿಷದ್ ಭಜರಂಗದಳ ಮಾತೃಶಕ್ತಿ ಹಾಗೂ ದುರ್ಗಾವಾಹಿನಿ ಮೂಡುಬೆಳ್ಳೆ ಘಟಕದ ವತಿಯಿಂದ ಅಕ್ಟೋಬರ್ 04, ಮಂಗಳವಾರ ಬೆಳ್ಳೆ ಗೀತಾ ಮಂದಿರದಲ್ಲಿ ವೇದಮೂರ್ತಿ ವಿಖ್ಯಾತ ಭಟ್ ಇವರ ನೇತೃತ್ವದಲ್ಲಿ 15ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಶಾರದಾ ಪೂಜೆ, ಮಹಾ ಚಂಡಿಕಾಯಾಗ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆಯು ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಮೂಡುಬೆಳ್ಳೆ ಘಟಕದ ಅಧ್ಯಕ್ಷರಾದ ಗೋಪಾಲಕೃಷ್ಣ ಪೈ, ಕಾರ್ಯದರ್ಶಿಯಾದ ಅಭಿಷೇಕ್ ಆಚಾರ್ಯ, ಭಜರಂಗದಳ ಸಂಯೋಜಕ್ ಮಿಥುನ್ ಪೂಜಾರಿ, ವಾಣಿ ಆಚಾರ್ಯ ಮಾತೃಶಕ್ತಿ ಪ್ರಮುಖ್, ದೀಪಾ ಶೆಟ್ಟಿ ದುರ್ಗಾವಾಹಿನಿ ಪ್ರಮುಖ್, ದೀಪಕ್ ಮೂಡುಬೆಳ್ಳೆ ಜಿಲ್ಲಾ ಸೇವಾಪ್ರಮುಖ್, ಸಂತೋಷ್ ಕುಮಾರ್ ಮೂಡುಬೆಳ್ಳೆ, ಕೃಷ್ಣಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.