ಕಾಪು ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಪುಣೆ ಸಮಿತಿಗೆ ಚಾಲನೆ , ಶ್ರೀದೇವಿ ಮಹಾತ್ಮೆ ಯಕ್ಷಗಾನ
Posted On:
14-10-2022 09:54PM
ಪುಣೆ : ಕಾಪು ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿಗಾಗಿ ರಚಿಸಿದ ಪುಣೆ ಸಮಿತಿಯ ಉದ್ಘಾಟನಾ ಸಮಾರಂಭ ಹಾಗೂ ಪಟ್ಲ ಸತೀಶ್ ಶೆಟ್ಟಿ ನೇತೃತ್ವದ ಹಾವಂಜೆ ಮೇಳದ ಕಲಾವಿದರಿಂದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನವು ಅ . ೧೩ ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದಲ್ಲಿ ಸಂಭ್ರಮದಿಂದ ನಡೆಯಿತು . ಪುಣೆ ಬಂಟರ ಸಂಘದ ಅಧ್ಯಕ್ಷ ಹಾಗೂ ಕಾಪು ಮಾರಿಗುಡಿ ಅಭಿವೃದ್ಧಿ ಪುಣೆ ಸಮಿತಿಯ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಇವರ ನೇತೃತ್ವದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಎಂ ಆರ್ ಜಿ ಗ್ರೂಪ್ ನ ಸಿಎಂಡಿ ಕೆ . ಪ್ರಕಾಶ್ ಶೆಟ್ಟಿ,ಕಾಪು ಮಾರಿಗುಡಿ ಅಭಿವೃದ್ಹಿ ಸಮಿತಿಯ ಅಧ್ಯಕ್ಷರಾದ ವಾಸುದೇವ ಶೆಟ್ಟಿ, ಉಪಾಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ದಿವಾಕರ ಶೆಟ್ಟಿ ಕಾಪು, ಮುಂಬಯಿ ಸಮಿತಿಯ ಅಧ್ಯಕ್ಷರಾದ ಸುಧಾಕರ ಹೆಗ್ಡೆ ,ಮುಂಬಯಿ ಸಮಿತಿಯ ಕಾರ್ಯಾಧ್ಯಕ್ಷರಾದ ರವಿ ಸುಂದರ್ ಶೆಟ್ಟಿ ,ಕಾಪು ಮಾರಿಗುಡಿ ಅಭಿವೃದ್ಹಿ ಪ್ರಚಾರ ಸ ಮಿತಿ ಅಧ್ಯಕ್ಷರಾದ ಯೋಗೇಶ್ ಶೆಟ್ಟಿ ,ಆರ್ಥಿಕ ಸಮಿತಿಯ ಮುಖ್ಯ ಪ್ರಧಾನ ಸಂಚಾಲಕರಾಗಿರುವ ಉದಯ್ ಸುಂದರ್ ಶೆಟ್ಟಿ , ಸಂದೀಪ್ ಶೆಟ್ಟಿ , ರವಿರಾಜ್ ಶೆಟ್ಟಿ ,ಮೋಹನ್ ಶೆಟ್ಟಿ ,ದಿವಾಕರ ಶೆಟ್ಟಿ , ದಯಾನಂದ್ ಶೆಟ್ಟಿ ಉಪಸ್ಥಿತರಿದ್ದು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾಪು ಹೊಸ ಮಾರಿಗುಡಿಯ ಅಭಿವೃದ್ಧಿ ಪುಣೆ ಸಮಿತಿಯ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಹಾಗೂ ಪದಾಧಿಕಾರಿಗಳಿಗೆ ಕಾಪು ಮಾರಿಗುಡಿ ಅಭಿವೃದ್ಹಿ ಸಮಿತಿಯ ಅಧ್ಯಕ್ಷರಾದ ವಾಸುದೇವ ಶೆಟ್ಟಿ ಯವರು ಶ್ರೀದೇವಿಯ ಪ್ರಸಾದವನ್ನು ನೀಡಿದರು . ಅತಿಥಿಗಳನ್ನು ಶಾಲು ಹೊದೆಸಿ ಪುಷ್ಪಗುಚ್ಛ ನೀಡಿ ಗೌರವಿಸಲಾಯಿತು. ವಾಸುದೇವ ಶೆಟ್ಟಿಯವರು ಕಾಪು ಹೊಸ ಮಾರಿಗುಡಿಯ ಜೀರ್ಣೋದ್ಧಾರದ ಬಗ್ಗೆ ವಿವರಿಸಿದರು.
ಕಾರ್ಯಕ್ರಮದಂಗವಾಗಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಸ್ಥಾಪಕ ,ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಕೃಪಾಪೋಷಿತ ಯಕ್ಷಗಾನ ,ಮಂಡಳಿ ,ನಾಗವ್ರುಜ ಕ್ಷೇತ್ರ ಪಾವಂಜೆಯ ಪ್ರಸಿದ್ಧ ಕಲಾವಿದರಿಂದ "ಸಂಪೂರ್ಣ ಶ್ರೀದೇವಿ ಮಹಾತ್ಮೆ "ಯಕ್ಷಗಾನ ಪ್ರದರ್ಶನ ನಡೆಯಿತು . ಕಾರ್ಯಕ್ರಮದಲ್ಲಿ ಕಾಪು ಹೊಸ ಮಾರಿಗುಡಿ ಪುಣೆ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ,ಮುಖ್ಯ ಸಲಹಾ ಸಮಿತಿಯ ಸದಸ್ಯರು ,ಉತ್ತರ ವಲಯ ಸಮಿತಿ ,ದಕ್ಷಿಣ ವಲಯ ಸಮಿತಿ ,ಪಿಂಪ್ರಿ
-ಚಿಂಚ್ವಾಡ್, ಹಡಪ್ಸರ್, ಯುವ ವಲಯ ಹಾಗೂ ಮಹಿಳಾ ವಲಯ ಸಮಿತಿಯ ಸದಸ್ಯರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಾಧ್ಯಕ್ಷರಾದ ಪಾದೂರು ಹೊಸಮನೆ ಮಾಧವ ಆರ್ ಶೆಟ್ಟಿ ,ಉಪಾಧ್ಯಕ್ಷರಾದ ಎರ್ಮಾಳ್ ಚಂದ್ರಹಾಸ ಶೆಟ್ಟಿ , ವಿಶ್ವನಾಥ ಪೂಜಾರಿ ಕಡ್ತಲ , ಪ್ರವೀಣ್ ಶೆಟ್ಟಿ ಪುತ್ತೂರು ,ಪ್ರಧಾನ ಕಾರ್ಯದರ್ಶಿ ಪ್ರಸನ್ನ ಶೆಟ್ಟಿ ,ಕಾರ್ಯದರ್ಶಿ ಉದಯ್ ಶೆಟ್ಟಿ ಕಳತ್ತೂರು, ಗೌರವ ಕೋಶಾಧಿಕಾರಿ ದಿನೇಶ್ ಶೆಟ್ಟಿ ಕಳತ್ತೂರು , ಜೊತೆ ಕೋಶಾಧಿಕಾರಿ ಜಗದೀಶ್ ಶೆಟ್ಟಿ ,ವಿವಿಧ ವಲಯಗಳ ಕಾರ್ಯಾಧ್ಯಕ್ಷರಾದ ಗಣೇಶ್ ಹೆಗ್ಡೆ ಪುಂಚೂರು, ಜಗದೀಶ್ ಶೆಟ್ಟಿ , ರವಿ ಕೆ ಶೆಟ್ಟಿ ಕಾಪು ,ಗಣೇಶ್ ಪೂಂಜಾ , ರೋನಕ್ ಜಯ ಶೆಟ್ಟಿ , ಕಾರ್ಯಾಧ್ಯಕ್ಷೆ ಸುಲತಾ ಸತೀಶ್ ಶೆಟ್ಟಿ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.