ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಹುಲಿವೇಷ, ಮರಕಾಲು ಕುಣಿತದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಿಂಚಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಅಂತ್ರ ಆನಂದ್ ಕೋಟ್ಯಾನ್

Posted On: 14-10-2022 11:48PM

ಉಡುಪಿ : ನ್ಯಾಷನಲ್ ಪರ್ಫಾಮಿಂಗ್ ಆರ್ಟ್ಸ್ ಚಾಂಪಿಯನ್ ಶಿಪ್ ಮಹಾರಾಷ್ಟ್ರ - 2022 ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಹುಲಿವೇಷ ಧರಿಸಿ, ಮರಕಾಲು ಕುಣಿತದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಪಡೆದು ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಅಂತ್ರ ಆನಂದ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ.

ಕೊರಂಗ್ರಪಾಡಿಯ ಆನಂದ್ ಕೋಟ್ಯಾನ್ ಮತ್ತು ತನುಜಾ ಕೋಟ್ಯಾನ್ ದಂಪತಿಗಳ ಪುತ್ರಿಯಾದ ಈಕೆ ಉಡುಪಿ ಸೈಂಟ್ ಸಿಸಿಲಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ.