ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಬೆಳ್ಮಣ್ : ಕೃಷಿ ರತ್ನ - 2022 ಪ್ರಶಸ್ತಿ ಪುರಸ್ಕೃತರಾದ ಕಾಪುವಿನ ಶಾರದೇಶ್ವರಿ ಗುರ್ಮೆ

Posted On: 17-10-2022 07:50PM

ಬೆಳ್ಮಣ್ : ಜೇಸಿಐ ಇಂಡಿಯ ವಲಯದ ಪಂಚರತ್ನ ಪ್ರಶಸ್ತಿಗಳಲ್ಲಿ ಒಂದಾದ ಕೃಷಿ ರತ್ನ - 2022 ಪ್ರಶಸ್ತಿಯನ್ನು ಅಕ್ಟೋಬರ್ 16ರಂದು ಬೆಳ್ಮಣ್ ನಲ್ಲಿ ಜರಗಿದ ವಲಯ 15ರ ವ್ಯವಹಾರ ಸಮ್ಮೇಳನ 'ಸಂಚಲನ' ಸಾಧಕರ ಸಮಾಗಮ ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆಗೈದ ಜೇಸಿಐ ಕಾಪುವಿನ ಶಾರದೇಶ್ವರಿ ಗುರ್ಮೆ ಅವರಿಗೆ ನೀಡಿ ಗೌರವಿಸಲಾಯಿತು.

ಕೃಷಿಯಲ್ಲಿ ವಿಶೇಷ ಆಸಕ್ತಿ ಹೊಂದಿರುವ ಶಾರದೇಶ್ವರಿಯವರು ಸಾವಯವ ಕೃಷಿ ಪದ್ಧತಿಯ ಮೂಲಕ ಭತ್ತದ ಬೇಸಾಯ ಮಾಡುತ್ತಿರುವುದಲ್ಲದೆ, ತೆಂಗು ಮತ್ತು ಅಡಿಕೆ ಕೃಷಿಯಲ್ಲಿಯೂ ತೊಡಗಿಸಿಕೊಂಡು ಹೈನುಗಾರಿಕೆ ಹಾಗೂ ಎರೆಹುಳು ಗೊಬ್ಬರ ಘಟಕವನ್ನು ಸ್ಥಾಪಿಸಿ ಕೃಷಿಗೆ ಬೇಕಾದ ಗೊಬ್ಬರವನ್ನೂ ತಯಾರಿಸುತ್ತಿದ್ದಾರೆ. ವಿವಿಧ ಬಗೆಯ ತರಕಾರಿಗಳನ್ನು, ವಿವಿಧ ಹಣ್ಣಿನ ಗಿಡಗಳನ್ನು ಮತ್ತು ಔಷಧೀಯ ಸಸ್ಯಗಳನ್ನು ಬೆಳೆಸುವ ಹವ್ಯಾಸವನ್ನು ಹೊಂದಿರುವ ಇವರು ಅತ್ಯುತ್ತಮ ಕೃಷಿಕರಾಗಿದ್ದಾರೆ. ಜೇಸಿಐ ಸಂಸ್ಥೆ, ಇನ್ನಿತರ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.