ಕಾಪು: ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನಕ್ಕೆ ಕಾಶಿ ಮಠಾಧೀಶರಾದ ಶ್ರೀಮದ್ ಸಯಮೀಂದ್ರ ತೀರ್ಥ ಸ್ವಾಮೀಜಿ ಅವರು ಭೇಟಿ ನೀಡಿ ದೇವರ ದರುಶನ ಪಡೆದರು.
ಪ್ರಪ್ರಥಮ ಬಾರಿಗೆ ಕಾಪು ಹಳೆ ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಚಂಡಿಕಯಾಗದ ಪೂರ್ಣಹುತಿ ಕಾರ್ಯಕ್ರಮದಲ್ಲಿ ಭಾಗಿಯಾದರು.
ಈ ಸಂದರ್ಭದಲ್ಲಿ ಅರ್ಚಕರಾದ ಕಮಾಲಕ್ಷ ಭಟ್, ಶ್ರೀನಿವಾಸ್ ಭಟ್ , ರವೀಂದ್ರ ಭಟ್ ಶಿರ್ವ, ಆಡಳಿತ ಮೊಕ್ತೆಸರ ಪ್ರಸಾದ್ ಶೆಣೈ, ಮೊಕ್ತೆಸರರಾದ ರಾಮನಾಯಕ್, ಶ್ರೀಕಾಂತ್ ಭಟ್, ರಾಜೇಶ್ ಶೆಣೈ, ಸದಾಶಿವ ಕಾಮತ್, ಸದಸ್ಯರಾದ ಮಜೂರು ರಾಜೇಶ್ ಶೆಣೈ, ಚಂದ್ರಕಾಂತ್ ಕಾಮತ್, ಕೃಷ್ಣಾನಂದ್ ನಾಯಕ್, ಅತುಲ್ ಕುಡ್ವಾ ಮೊದಲಾದವರು ಉಪಸ್ಥಿತರಿದ್ದರು.