ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಡುಬಿದ್ರಿ : ಜೀರ್ಣೋದ್ಧಾರ ಸಮಿತಿಯ ವಿಜ್ಞಾಪನ ಪತ್ರ ಬಿಡುಗಡೆ, ಕೊರಗಜ್ಜ ದೈವದ ನೇಮೋತ್ಸವ, ಸಭಾ ಕಾರ್ಯಕ್ರಮ

Posted On: 20-10-2022 10:36AM

ಪಡುಬಿದ್ರಿ : ಕಾಪು ತಾಲೂಕಿನ ತಾಲೂಕಿನ ಸಾವಿರಾರು ವರ್ಷಗಳ ಇತಿಹಾಸವಿರುವ ಪಡುಬಿದ್ರಿಯ ಶ್ರೀ ಆದಿಶಕ್ತಿ ಆದಿ ಮಾಯೆ ಅಣ್ಣಪ್ಪ ಪಂಜುರ್ಲಿ ಮಂತ್ರ ದೇವತೆ ಹಾಗೂ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಅಕ್ಟೋಬರ್ 22, ಶನಿವಾರ ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ವಿಜ್ಞಾಪನ ಪತ್ರ ಬಿಡುಗಡೆ ಹಾಗೂ ಸಂಜೆ 4 ಗಂಟೆಗೆ ಕೊರಗಜ್ಜ ದೈವದ ನೇಮೋತ್ಸವ ಹಾಗೂ ಸಭಾ ಕಾರ್ಯಕ್ರಮ ಜರಗಲಿದೆ.

ಈ ನಿಮಿತ್ತ ವಜ್ರದೇಹಿ ಮಠ ಗುರುಪುರದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರನ್ನು ಕ್ಷೇತ್ರದ ಪ್ರಮುಖರು ಭೇಟಿಯಾಗಿ ಸಭಾ ಕಾರ್ಯಕ್ರಮಕ್ಕೆ ಆಮಂತ್ರಣ ನೀಡಿದರು.

ಈ ಸಂದರ್ಭದಲ್ಲಿ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿಗಳಾದ ಸುಧಾಕರ್ ಮಡಿವಾಳ, ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಡುಬಿದ್ರಿ ಹಾಗೂ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಸಚ್ಚಿದನಂದ ಶೆಟ್ಟಿ ಉಡುಪಿ, ಜೀರ್ಣೋದ್ಧಾರ ಸಮಿತಿಯ ಸಹ ಸಂಚಾಲಕರಾದ ವಿನೋದ್ ಶೆಟ್ಟಿ ಉಡುಪಿ ಹಾಗೂ ಕುಮಾರ್ ಪಂಬದ ಉಪಸ್ಥಿತಿಯಿದ್ದರು.