ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಕಡಲ ಕಿನಾರೆಯಲ್ಲಿ ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ವತಿಯಿಂದ ನಡೆದ ಗೂಡುದೀಪ ಸ್ಪರ್ಧೆ ; ಬಹುಮಾನ ವಿತರಣೆ

Posted On: 26-10-2022 08:25PM

ಕಾಪು : ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿರುವ ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ವತಿಯಿಂದ ರವಿವಾರ ಕಾಪು ಬೀಚ್ ನಲ್ಲಿ ಗೂಡುದೀಪ ಸ್ಪರ್ಧೆಯು ನಡೆಯಿತು.

ಈ ಸಂದರ್ಭ ಮಾತಾಡಿದ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಸಾಂಪ್ರದಾಯಿಕತೆಯನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ಸ್ಪರ್ಧೆಗಳು ಅನಿವಾರ್ಯ. ಶಂಕರ ಪ್ರತಿಷ್ಠಾನದ ಕಾರ್ಯ ಶ್ಲಾಘನೀಯ ಎಂದರು. ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ಟ್ರಸ್ಟಿ ಶ್ರೀಶ ನಾಯಕ್ ಮಾತನಾಡಿ ಪ್ರತಿವರ್ಷ ಸಮಾಜಮುಖಿ ಕಾರ್ಯದಲ್ಲಿ ತೊಡಗಿರುವ ನಮ್ಮ ಟ್ರಸ್ಟ್ ತಂದೆಯ ಆಶಯದಂತೆ ನಡೆಯುತ್ತಿದೆ. ಸಾಂಸ್ಕೃತಿಕ, ಧಾರ್ಮಿಕವಾಗಿ ಜನರಿಗೆ ಸ್ಪಂದಿಸುವ ನಿಟ್ಟಿನಲ್ಲಿ ನಮ್ಮ ಟ್ರಸ್ಟ್ ಇದೆ ಎಂದರು.

ಧನ ಸಹಾಯ : ಆರೋಗ್ಯ ಮತ್ತು ಗೃಹ ನಿರ್ಮಾಣಕ್ಕಾಗಿ ಟ್ರಸ್ಟ್ ವತಿಯಿಂದ ಧನಸಹಾಯ ವಿತರಿಸಲಾಯಿತು. ಬಹುಮಾನ ವಿಜೇತರು : ಪ್ರಥಮ ಬಹುಮಾನ ರೂ. 11,111ನ್ನು ರಕ್ಷಿತ್ ಕುಮಾರ್ ಕಾಪಿಕಾಡ್, ದ್ವಿತೀಯ ರೂ. 7,777ನ್ನು ರವಿರಾಜ್ ಮಂಗಳೂರು, ತೃತೀಯ ರೂ.5,555ನ್ನು ಉಮೇಶ್ ಕಾವೂರು ಪಡೆದುಕೊಂಡರು. ಕಲಾವಿದರಾದ ಶಶಾಂಕ್, ರಕ್ಷಾ ಮತ್ತು ಯಶವಂತ್ ಗೂಡುದೀಪ ಸ್ಪರ್ಧೆಯ ತೀರ್ಪುಗಾರರಾಗಿ ಸಹಕರಿಸಿದ್ದರು.

ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ, ಉದಯ ಕುಮಾರ್ ಶೆಟ್ಟಿ, ಶಾಸಕ ಲಾಲಾಜಿ ಆರ್ ಮೆಂಡನ್, ಶ್ರೀಕಾಂತ ನಾಯಕ್, ಕುತ್ಯಾರು ನವೀನ್ ಶೆಟ್ಟಿ, ವೀಣಾ ಶೆಟ್ಟಿ, ದಿನೇಶ್ ಮೆಂಡನ್, ಗಂಗಾಧರ ಸುವರ್ಣ, ಶಿಲ್ಪಾ ಸುವರ್ಣ, ಮಿಥುನ್ ಹೆಗ್ಡೆ, ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ, ಅನಿಲ್ ಶೆಟ್ಟಿ, ಸ್ವೀಕಾರ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು. ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ಟ್ರಸ್ಟಿ ಶ್ರೀಶ ನಾಯಕ್ ಸ್ವಾಗತಿಸಿ, ಪ್ರಸ್ತಾವಿಸಿದರು. ಯಶವಂತ್ ಕಾರ್ಯಕ್ರಮ ನಿರೂಪಿಸಿದರು. ಸಂತೋಷ್ ಕುಮಾರ್ ಮೂಡುಬೆಳ್ಳೆ ವಂದಿಸಿದರು.