ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಹಾರಾಷ್ಟ್ರದ ಕಂದಾಯ ಸಚಿವರ ಭೇಟಿ

Posted On: 29-10-2022 08:29PM

ಕಾಪು : ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಹಾರಾಷ್ಟ್ರ ರಾಜ್ಯದ ಕಂದಾಯ ಸಚಿವರು ಮತ್ತು ಶಿರಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಪತ್ನಿ ಶಾಲಿನಿತೈ ವಿಖೆ ಪಾಟೀಲ್ ಇವರು ಜೀರ್ಣೋದ್ಧಾರದ ಮುಂಬೈ ಸಮಿತಿಯ ಕಾರ್ಯಾಧ್ಯಕ್ಷರು ಮತ್ತು ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ರವಿ ಸುಂದರ್ ಶೆಟ್ಟಿಯವರೊಂದಿಗೆ ಭೇಟಿ ನೀಡಿದರು.

ಶ್ರೀ ದೇವಿಯ ಸನ್ನಿದಾನದಲ್ಲಿ ಜೀರ್ಣೋದ್ಧಾರ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳ ಸಮ್ಮುಖದಲ್ಲಿ ಪ್ರಾರ್ಥಿಸಿ ಶ್ರೀದೇವಿಯ ಅನುಗ್ರಹ ಪ್ರಸಾದವನ್ನು ನೀಡಲಾಯಿತು.

ನಂತರ ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀ ಕೆ. ವಾಸುದೇವ ಶೆಟ್ಟಿಯವರು ಭರದಿಂದ ಸಾಗುತ್ತಿರುವ ಜೀರ್ಣೋದ್ಧಾರ ಕಾಮಗಾರಿಯ ಬಗ್ಗೆ ಮಾಹಿತಿ ನೀಡಿದರು. ದಕ್ಷಿಣ ಭಾರತದಲ್ಲಿಯೇ ವಿಶಿಷ್ಟ ರೀತಿಯಲ್ಲಿ ಇಲ್ಕಲ್ ಶಿಲೆಯಿಂದ ನಿರ್ಮಾಣಗೊಳ್ಳುತ್ತಿರುವ ದೇಗುಲದ ಬಗ್ಗೆ ಸಂತೋಷ ವ್ಯಕ್ತಪಡಿಸಿ, ಮಹಾರಾಷ್ಟ್ರದ ಹಾಗೂ ಶಿರಡಿಯ ಭಕ್ತರಿಗೂ ಮಾರಿಯಮ್ಮನ ದೇಗುಲ ನಿರ್ಮಾಣದ ಸುದ್ದಿಯನ್ನು ತಲುಪಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ರಮೇಶ್ ಹೆಗ್ಡೆ ಕಲ್ಯಾ, ಆರ್ಥಿಕ ಸಮಿತಿಯ ಸಿದ್ಧಿಧಾತ್ರಿ ತಂಡದ ಸಂಚಾಲಕರಾದ ಸುಲೋಚನಾ ಕೆ ಸುವರ್ಣ, ದೇವಳದ ಸಿಬ್ಬಂದಿಗಳಾದ ಗೋವರ್ಧನ್ ಸೇರಿಗಾರ್ ಮತ್ತು ಲಕ್ಷ್ಮಣ್ ಶೆಟ್ಟಿ ಮಂಡೇಡಿ ಉಪಸ್ಥಿತರಿದ್ದರು.