ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಹೆಜಮಾಡಿ ಟೋಲ್ ಸಿಬ್ಬಂದಿಗೆ ಹಲ್ಲೆ, ಬೆದರಿಕೆ

Posted On: 04-11-2022 01:56PM

ಪಡುಬಿದ್ರಿ : ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿಯೋರ್ವರಿಗೆ ಯುವಕರ ಗುಂಪೊಂದು ಎರಡು ಕಾರುಗಳಲ್ಲಿ ಬಂದು ಹಲ್ಲೆ ನಡೆಸಿದ ಬಗ್ಗೆ ದೂರು ದಾಖಲಾಗಿದೆ.

ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಮಟ್ಟಿ ಹೌಸ್ ನಿವಾಸಿ ಸುದೀಶ್ ಜೆ ಶೆಟ್ಟಿ ಇವರು ಹೆಜಮಾಡಿಯ ಟೋಲ್‌ಗೇಟಿನಲ್ಲಿ ಕೆಲಸ ಮಾಡಿಕೊಂಡಿದ್ದು ಅಕ್ಟೋಬರ್ 30 ರಂದು ರಾತ್ರಿ ಕರ್ತವ್ಯದಲ್ಲಿರುವ ಸಮಯ 11ಗಂಟೆಯ ವೇಳೆಗೆ ಹೆಜಮಾಡಿಯ ಸಂದೇಶ್ ಶೆಟ್ಟಿ, ಮನೋಜ್ ಸುವರ್ಣ, ಶ್ರೇಯಸ್ ದೇವಾಡಿಗ ಮುಕ್ಕ, ಜಯರಾಜ್ ಪೂಜಾರಿ ಹೆಜಮಾಡಿ, ಕೀರ್ತನ್ ಪೂಜಾರಿ ಕೊಪ್ಪಲ ಹೆಜಮಾಡಿ ಹಾಗೂ ಇತರೆ 3 ಜನರು ಎರಡು ಕಾರುಗಳಲ್ಲಿ ಹೆಜಮಾಡಿ ಟೋಲ್‌ಗೇಟ್ ಬಳಿ ಬಂದು ಸುದೀಶ್ ಜೆ ಶೆಟ್ಟಿ ಯನ್ನು ಏಕಾಏಕಿ ದೂಡಿ ಹಾಕಿ, ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿರುತ್ತಾರೆ ಎಂದು ಸುದೀಶ್ ಜೆ ಶೆಟ್ಟಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ರಾತ್ರಿ ಸಮಯ ಸುದೀಶ್ ಜೆ ಶೆಟ್ಟಿ ಗೆ ಪೋನ್ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದು, ಪೋನ್ ಕರೆ ಸ್ವೀಕರಿಸದಿದ್ದಾಗ ಮೆಸೇಜ್‌ಗಳ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರನ್ನು ನೀಡಿದ್ದು ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.