ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಇನ್ನಂಜೆ : ಸುವರ್ಣಮಹೋತ್ಸವ ಕಟ್ಟಡದ ವಿಜ್ಞಾಪನಾ ಪತ್ರ ಬಿಡುಗಡೆ

Posted On: 06-11-2022 06:31PM

ಇನ್ನಂಜೆ : ಇಲ್ಲಿನ ಇನ್ನಂಜೆ ಯುವಕ ಮಂಡಲ (ರಿ) ಇದರ ಸುವರ್ಣಮಹೋತ್ಸವ ಕಟ್ಟಡದ ವಿಜ್ಞಾಪನಾ ಪತ್ರವನ್ನು ಸೋದೆ ವಾದಿರಾಜ ಮಠದ ಯತಿಗಳಾದ ವಿಶ್ವವಲ್ಲಭ ತೀರ್ಥರು ಹಾಗೂ ಇನ್ನಂಜೆಯ ಉದ್ಯಮಿ ಗ್ರೇಗೊರಿ ಮಥಾಯಸ್ ಬಿಡುಗಡೆಗೊಳಿಸಿದರು.

ಈ ಸಂದರ್ಭ ಸಲಹಾ ಸಮಿತಿಯ ಸದಸ್ಯರುಗಳಾದ ನಂದನ್ ಕುಮಾರ್ ಮತ್ತು ರವಿವರ್ಮ ಶೆಟ್ಟಿ ಮತ್ತು ಯುವಕ ಮಂಡಲದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಮಾಜಿ ಅಧ್ಯಕ್ಷರುಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು.