ಕಾಪು : ವಿಶ್ವ ಹಿಂದೂ ಪರಿಷದ್ ನ ಹಿತ ಚಿಂತಕ ಅಭಿಯಾನಕ್ಕೆ ಕಾಪು ತಾಲೂಕಿನ ಮಟ್ಟಾರುವಿನಲ್ಲಿ ಚಾಲನೆ ನೀಡಲಾಯಿತು.
ಈ ಸಂದರ್ಭ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬಂಟಕಲ್ಲು ಇದರ ಆಡಳಿತ ಮೊಕ್ತೇಸರರಾದ ಶಶಿಧರ ವಾಗ್ಳೆ, ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪ್ರಸಾದ್ ಕುತ್ಯಾರು, ವಿಶ್ವ ಹಿಂದೂ ಪರಿಷದ್ ಕಾಪು ಪ್ರಖಂಡ ಅಧ್ಯಕ್ಷ ಜಯಪ್ರಕಾಶ್ ಪ್ರಭು, ಕಾರ್ಯದರ್ಶಿ ರಾಜೇಂದ್ರ ಶೆಣೈ, ಬಜರಂಗದಳ ಸಹ ಸಂಚಾಲಕ ಪ್ರಸಾದ್ ಅಂಚನ್ ಉಪಸ್ಥಿತರಿದ್ದರು.