ಎರ್ಮಾಳು : ಉತ್ತರ ಪ್ರದೇಶದ ರಾಂಪುರ ಕ್ಷೇತ್ರದ ಮಾಜಿ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯೆ ಹಾಗೂ ಖ್ಯಾತ ಬಹುಭಾಷಾ ಚಲನಚಿತ್ರ ನಟಿ ಜಯಪ್ರದ ಎರ್ಮಾಳು ಜನಾರ್ಧನ ದೇವಳಕ್ಕೆ ಇಂದು ಭೇಟಿ ನೀಡಿದರು.
ಈ ಸಂದರ್ಭ ದೇವಳ ಆಡಳಿತ ಮೊಕ್ತೇಸರರಾದ ಅಶೋಕ್ ರಾಜ್ ಎರ್ಮಾಳು ಬೀಡು, ಹರೀಶ್ ಶೆಟ್ಟಿ ಎರ್ಮಾಳು, ಸಂತೋಷ್ ಶೆಟ್ಟಿ ಬರ್ಪಾಣಿ, ಕಿಶೋರ್ ಶೆಟ್ಟಿ ಎರ್ಮಾಳು ಮತ್ತಿತರರು ಉಪಸ್ಥಿತರಿದ್ದರು.