ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಯಶಸ್ವಿ ಜನಸಂಕಲ್ಪ ಸಮಾವೇಶ : ಕಾಪು ಬಿಜೆಪಿ

Posted On: 07-11-2022 08:26PM

ಕಾಪು : ಪೂರ್ವತಯಾರಿಕೆಗೆ ಕೆಲವೇ ದಿನಗಳ ಅವಕಾಶ ದೊರೆತರೂ, ಹತ್ತು ಹಲವು ಕಾರ್ಯಕ್ರಮಗಳಿದ್ದರೂ, ವಾರದ ನಡುವೆ ಆದರೂ ನಮ್ಮ ಕಾರ್ಯಕರ್ತರು ಪಕ್ಷಕ್ಕಾಗಿ ಸಮರ್ಪಣೆ ಮಾಡಲು ಸದಾ ಸಿದ್ದ ಎಂದು ರೂಪಿಸಿದ ಐತಿಹಾಸಿಕ ಕಾರ್ಯಕ್ರಮ ಕಾಪು ಬಿಜೆಪಿಯ ಇಂದಿನ ಜನಸಂಕಲ್ಪ ಸಮಾವೇಶ. ಸಮಯ ನಿಗದಿಯಾಗಿ ಕೇವಲ ಕೆಲವೇ ದಿನಗಳು ಬಾಕಿ ಇದ್ದರೂ ಎಲ್ಲ ಪಂಚಾಯತ್ ಗಳಲ್ಲಿ ಸಭೆಗಳನ್ನು ನಡೆಸಿ, ಕಾರ್ಯಕರ್ತರ ಮನ ಒಲಿಸಿ, ಬೇಸಾಯದ ಸಂದರ್ಭದಲ್ಲಿ, ರಜಾದಿನವಲ್ಲದಿದ್ದರೂ, ಬೇರೆ ದೊಡ್ಡ ಮಟ್ಟದ ಧಾರ್ಮಿಕ ಕಾರ್ಯಕ್ರಮ ಇದ್ದರೂ, ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ ಬೂತ್ ಬೂತ್ ಗಳಿಂದ ಫಲಾನುಭವಿ ಕಾರ್ಯಕರ್ತರನ್ನು ಕರೆತಂದು ಕಾಪು ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎಂದು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ.

ನಮ್ಮ ದೇವ ದುರ್ಲಭ ಕಾರ್ಯಕರ್ತರು. ಪಕ್ಷದ ಮೇಲಿನ ಅಭಿಮಾನ ಪಕ್ಷದ ಮೇಲಿನ ಗೌರವದ ಮುಂದೆ ಉಳಿದೆಲ್ಲ ವಿಚಾರಗಳ ನಮಗೆ ಗೌಣವಾಗುತ್ತವೆ ಎಂದು ನಿರೂಪಿಸಿರುವಿರಿ. ಎದುರಾಳಿಗಳಿಗೆ ಸ್ಪಷ್ಟ ಸಂದೇಶ ಇಂದು ಸಿಕ್ಕಿರಬೇಕು. ಮತ್ತೂ ಸಿಗದಿದ್ದರೆ ಅವರ ದುರಾದ್ರಷ್ಟ. ಒಂದಂತೂ ಸತ್ಯ ಇಂದಿನ ಕಾರ್ಯಕ್ರಮಕ್ಕೆ ಬಂದ ಎಲ್ಲ ಕಾರ್ಯಕರ್ತರಿಗೆ ಮತ್ತೆ ಚುನಾವಣೆ ಗೆಲ್ಲುವ ಭರವಸೆ ಬಂದದ್ದು ಮಾತ್ರ ಸುಳ್ಳಲ್ಲ. ಈ ಮೂಲಕ ಜನಸಂಕಲ್ಪ ಸಮಾವೇಶ ಯಶಸ್ವಿಯಾಗಿದೆ. ಮತ್ತೆ ಚುನಾವಣೆ ನಾವು ಗೆಲ್ಲುವೆವು. ಗೆದ್ದೇ ಗೆಲ್ಲುವೆವು ಎಂದು ಬಿಜೆಪಿ ಕಾಪು ಕ್ಷೇತ್ರದ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.