ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ ಸಡಗರದ ದೀಪಾವಳಿ ಹಾಗೂ ತುಳಸಿ ಹಬ್ಬ

Posted On: 07-11-2022 08:45PM

ಕಾರ್ಕಳ : ಇಲ್ಲಿನ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ ನವೆಂಬರ್ 5 ರಂದು ದೀಪಾವಳಿ ಮತ್ತು ತುಳಸಿ ಪೂಜಾ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ವಿದ್ಯಾರ್ಥಿಗಳಲ್ಲಿ ನಮ್ಮ ಪರಂಪರೆ, ಸಾಂಸ್ಕೃತಿಕ ಮೌಲ್ಯಗಳನ್ನು ತಿಳಿಯಲು ಮತ್ತು ಹಬ್ಬಗಳ ಮಹತ್ವ ತಿಳಿಯಲು ಭಾರತೀಯ ಪರಂಪರೆಯ ಹಬ್ಬಗಳು ಮಾದರಿಯಾಗಿವೆ ಎಂದು ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ತಿಳಿಸಿದರು.

ಸಂಸ್ಥಾಪಕರಲ್ಲೊಬ್ಬರಾದ ಅಶ್ವಥ್‌ ಎಸ್‌ ಎಲ್‌ ಮಾತನಾಡಿ ಭಾರತೀಯ ಹಬ್ಬಗಳು ವೈಜ್ಞಾನಿಕವಾಗಿಯೂ, ಸಾಂಸ್ಕೃತಿಕವಾಗಿಯೂ ಅತ್ಯಂತ ಮಹತ್ವ ಹೊಂದಿದೆ. ಆಧ್ಯಾತ್ಮಿಕವಾಗಿ ನೋಡಿದಾಗಲು ಶ್ರೇಷ್ಠ ಮೌಲ್ಯಗಳ ಪ್ರತೀಕವಾಗಿವೆ. ಎಲ್ಲರಲ್ಲು ಹಬ್ಬವು ಸಾಮರಸ್ಯವನ್ನು ತರಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಭಾರತೀಯ ಪರಂಪರೆಯನ್ನು ಬಿಂಬಿಸುವ ಉಡುಗೆ-ತೊಡುಗೆಗಳನ್ನು ಧರಿಸಿ ದೀಪ ಬೆಳಗಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸಂಸ್ಥೆಯ ಸಂಸ್ಥಾಪಕರುಗಳಾದ ಡಾ. ಗಣನಾಥ ಶೆಟ್ಟಿ, ಅಮೃತ್‌ ರೈ, ಆದರ್ಶ ಎಂ ಕೆ, ವಿಮಲ್‌ ರಾಜ್‌, ಗಣಪತಿ ಕೆ ಎಸ್‌ ಉಪನ್ಯಾಸಕ ವರ್ಗದವರು ಕಾರ್ಯಕ್ರಮದಲ್ಲಿ ಭಾಗಿಯಾದರು. ತದನಂತರ ಸಂಸ್ಥೆಯ ಆವರಣದಲ್ಲಿ ದೀವಟಿಗೆ ಬೆಳಕಿನಲ್ಲಿ , ಸುಡುಮದ್ದು ಪ್ರದರ್ಶನ ನಡೆಯಿತು.