ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ನವೆಂಬರ್ 14 - 20 : 69 ನೇ ಅಖಿಲ ಭಾರತ ಸಹಕಾರ ಸಪ್ತಾಹ - ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯಲ್ಲಿ ವಿವಿಧ ಕಾರ್ಯಕ್ರಮಗಳು

Posted On: 11-11-2022 12:09PM

ಪಡುಬಿದ್ರಿ : 69ನೇ ಅಖಿಲ ಭಾರತ ಸಹಕಾರ ಸಪ್ತಾಹವು ನವಂಬರ್ 14ರಿಂದ 20ರವೆಗೆ ರಾಷ್ಟ್ರದಾದ್ಯಂತ ಆಚರಿಸಲಾಗುತಿದ್ದು ಇದರ ಅಂಗವಾಗಿ ಜಿಲ್ಲೆಯಲ್ಲಿಯೇ ಪ್ರಪ್ರಥಮ ಬಾರಿಗೆ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯು ಸಪ್ತಾಹದ 7 ದಿನಗಳಲ್ಲೂ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಿದೆ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಮತ್ತು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಡಾ| ಎಮ್ ಎನ್ ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ ಎಂದು ಸೊಸೈಟಿಯ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ಸೊಸೈಟಿಯ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ನವೆಂಬರ್ 14ರಂದು ಸೊಸೈಟಿಯ ಪ್ರಧಾನ ಕಚೇರಿಯ ವೈ ಲಕ್ಷ್ಮಣ ಸಭಾಂಗಣ, ಸಹಕಾರ ಸಂಗಮ ಪಡುಬಿದ್ರಿ ಇಲ್ಲಿ ಅಪರಾಹ್ನ 3ಕ್ಕೆ ರೈತರ ಸಮಾವೇಶ ಹಾಗೂ ರೈತರಿಂದ ಡಾ| ಎಮ್ ಎನ್ ರಾಜೇಂದ್ರ ಕುಮಾರ್ ಅವರಿಗೆ ಸನ್ಮಾನ, ಕೃಷಿ ಸಹಾಯ ಧನ ವಿತರಣೆ, ಶೀತಲೀಕರಣ ಶವ ಪೆಟ್ಟಿಗೆ ಸಾರ್ವಜನಿಕ ಉಪಯೋಗಕ್ಕೆ ಹಸ್ತಾಂತರ ಕಾರ್ಯಕ್ರಮ ಜೊತೆಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ನಿರ್ದೇಶಕರಾದ ಡಾ| ಐ ದೇವಿಪ್ರಸಾದ್ ಶೆಟ್ಟಿ, ರಾಜ್ಯ ಸಹಕಾರ ಸೌಹಾರ್ದ ಮಹಾಮಂಡಳ ನಿ. ಬೆಂಗಳೂರು ಇದರ ನಿರ್ದೇಶಕರಾದ ಮಂಜುನಾಥ್ ಎಸ್ ಕೆ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಗಿರೀಶ್ ಪಲಿಮಾರ್, ಮತ್ತು ಎ. ರಾಮಚಂದ್ರ ಆಚಾರ್ಯ ಇವರಿಗೆ ಗೌರವಾಭಿನಂದನೆಯು ಜರಗಲಿದೆ. ನವೆಂಬರ್ 15ರಂದು ಸೊಸೈಟಿಯ ಪ್ರಧಾನ ಕಚೇರಿಯ ವೈ ಲಕ್ಷ್ಮಣ ಸಭಾಂಗಣ, ಸಹಕಾರ ಸಂಗಮ ಪಡುಬಿದ್ರಿ ಇಲ್ಲಿ ಪೂವಾಹ್ನ 11ಕ್ಕೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿ. ಪಡುಬಿದ್ರಿ, ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇವರ ಸಯುಕ್ತ ಆಶ್ರಯದಲ್ಲಿ ಸಹಕಾರ ಮಾರುಕಟ್ಟೆ, ಗ್ರಾಹಕ, ರೂಪಾಂತರ ಮತ್ತು ಮೌಲ್ಯವರ್ಧನೆ ಬಗ್ಗೆ ಸಹಕಾರಿಯವರಿಗೆ ತರಬೇತಿ ನವೆಂಬರ್ 16ರಂದು ಅಪರಾಹ್ನ 4ಕ್ಕೆ ಪಡುಬಿದ್ರಿಯ ಕಾರ್ಕಳ ವೃತ್ತದಲ್ಲಿ ಪಡುಬಿದ್ರಿ ಆರಕ್ಷಕರ ಠಾಣೆಗೆ ಧ್ವನಿವರ್ಧಕ ಹಾಗೂ ಸಂಚಾರ ನಿರ್ವಹಣೆ ಭೂತ್ ಹಸ್ತಾಂತರ. ನವೆಂಬರ್ 17ರಂದು ಸೊಸೈಟಿಯ ಪ್ರಧಾನ ಕಚೇರಿಯ ವೈ ಲಕ್ಷ್ಮಣ ಸಭಾಂಗಣ, ಸಹಕಾರ ಸಂಗಮ ಪಡುಬಿದ್ರಿ ಇಲ್ಲಿ ಪಡುಬಿದ್ರಿ ಸಹಕಾರಿ ವ್ಯವಸಾಯ ಸೊಸೈಟಿ ನಿ. ಪಡುಬಿದ್ರಿ ಮತ್ತು ಪ್ರಜಾವಾಣಿ ಹಾಗೂ ಡೆಕ್ಕನ್ ಹೆರಾಲ್ಡ್ ವಾರ್ತಾ ದಿನಪತ್ರಿಕೆ ಸಹಯೋಗದೊಂದಿಗೆ ಮಾಸ್ಟರ್ ಮೈಂಡ್ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಸೂಕ್ತ ಡಿಜಿಟಲ್ ಕೈಪಿಡಿ ಯೋಜನೆ. ನವೆಂಬರ್ 19 ರಂದು ಪೂರ್ವಾಹ್ನ 10ಕ್ಕೆ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಡುಬಿದ್ರಿ ಸಹಕಾರಿ ವ್ಯವಸಾಯ ಸೊಸೈಟಿ ನಿ. ಪಡುಬಿದ್ರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಪಡುಬಿದ್ರಿ, ಹಳೆ ವಿದ್ಯಾರ್ಥಿ ಸಂಘ ಗಣಪತಿ ಪ್ರೌಢಶಾಲೆ ಪಡುಬಿದ್ರಿ ಇವರ ಜಂಟಿ ಆಶ್ರಯದಲ್ಲಿ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೀಡಿದ ಶೀತಲೀಕೃತ ಶವಗಾರ ಉದ್ಘಾಟನೆ, ವೈದ್ಯಕೀಯ ಶಿಬಿರ. ನವೆಂಬರ್ 20ರಂದು ಸಹಕಾರ ಸಪ್ತಾಹದ ಸಮಾರೋಪ ಕಾರ್ಯಕ್ರಮ ಜರಗಲಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ವಿವಿಧ ಕ್ಷೇತ್ರದ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸೊಸೈಟಿಯ ಅಧ್ಯಕ್ಷರಾದ ವೈ ಸುಧೀರ್ ಕುಮಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಶ್ಮಿತಾ ಪಿ ಎಚ್, ನಿರ್ದೇಶಕರಾದ ಗಿರೀಶ್ ಪಲಿಮಾರ್, ಶಿವರಾಮ್ ಎನ್ ಶೆಟ್ಟಿ, ವಾಸುದೇವ ದೇವಾಡಿಗ, ಯಶವಂತ್ ಪಿ ಬಿ, ಸುಚರಿತ ಎಲ್ ಅಮೀನ್, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರತಿನಿಧಿ ಬಾಲಕೃಷ್ಣ ರಾವ್, ಎಸ್ ಸಿ ಡಿ ಸಿ ಸಿ ಬ್ಯಾಂಕ್ ಮ್ಯಾನೇಜರ್ ಪ್ರಭೋದ್ಚಂದ್ರ ಹೆಜಮಾಡಿ, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.