ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಳ್ಳೂರುಗುತ್ತು ಮನೆ ರಾಮಚಂದ್ರ ಶೆಟ್ಟಿ ನಿಧನ

Posted On: 12-11-2022 03:00PM

ಕಾಪು : ಉಳ್ಳೂರುಗುತ್ತು ಮನೆ ರಾಮಚಂದ್ರ ಶೆಟ್ಟಿಯವರು ಇಂದು ಬೆಳಗ್ಗೆ 9.04 ಕ್ಕೆ ಸ್ವಗೃಹ ಇನ್ನಂಜೆ ಉಂಡಾರು ಗುರುಕೃಪಾದಲ್ಲಿ ಅಸೌಖ್ಯದಿಂದಾಗಿ ದೈವಾಧೀನರಾದರು.

ಅವರ ಅಂತ್ಯ ವಿಧಿ ಕಾರ್ಯಗಳು ನಾಳೆ ಬೆಳಗ್ಗೆ 10.30ಕ್ಕೆ ಉಂಡಾರು ಗುರುಕೃಪಾ ಮನೆಯಲ್ಲಿ ನೆರವೇರಲಿದೆ.

ಮೃತರು 1 ಹೆಣ್ಣು, 3 ಗಂಡು ಮಕ್ಕಳನ್ನು, ಅಳಿಯ, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.