ಕಾಪು : ಶ್ರೀ ಬಬ್ಬರ್ಯ ದೈವಸ್ಥಾನ ಮೂಡು ಮಟ್ಟಾರು ದೈವಸ್ಥಾನದ ಜೀರ್ಣೋದ್ಧಾರ ಪೂರ್ವಭಾವಿಯಾಗಿ ತಾಂಬೂಲ ಪ್ರಶ್ನೆಯ ಪರಿಹಾರ ಕಾರ್ಯಕ್ರಮ ನವೆಂಬರ್ 11 ರಂದು ಸಂಜೆ 5 ರಿಂದ ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುಪತಿ ಗುಂಡು ಭಟ್ ಇವರ ನೇತೃತ್ವದಲ್ಲಿ ಮತ್ತು ಆಗಮನ ಪಂಡಿತ ವೇ| ಮೂ | ಕುತ್ಯಾರು ಕೇಂಜ ಶ್ರೀಧರ್ ತಂತ್ರಿ ಯವರ ಉಪಸ್ಥಿಯಲ್ಲಿ ಅಘೋರ ಹೋಮ ಮತ್ತು ಪ್ರೇತ ಉಚ್ಚಾಟನೆ ಹಾಗೂ ಇನ್ನಿತರ ವೈದಿಕ ವಿಧಿ ವಿಧಾನಗಳು ಬಬ್ಬರ್ಯ ದೈವಸ್ಥಾನದ ಸಾನಿಧ್ಯದಲ್ಲಿ ನಡೆಯಿತು.
ಮಟ್ಟಾರು ಬಬ್ಬರ್ಯ ದೈವಸ್ಥಾನ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಶಿರ್ವ ಗ್ರಾಮ ಪಂಚಾಯತ್ ಸದಸ್ಯ ಮಟ್ಟಾರು ಸುರೇಶ ನಾಯಕ್, ಮೂಡು ಮಟ್ಟಾರು ಬಬ್ಬರ್ಯ ದೈವಸ್ಥಾನದ ಅಧ್ಯಕ್ಷ ಜಗದೀಶ್ ಶೆಟ್ಟಿ, ಗೌರವ ಅಧ್ಯಕ್ಷ ಶಂಕರ ಶೆಟ್ಟಿ, ಉಪಾಧ್ಯಕ್ಷ ಹರಿಶ್ಚಂದ್ರ ಶೆಟ್ಟಿ, ವಿಠ್ಠಲ್ ಪೂಜಾರಿ, ಗೌರವಾ ಸಲಹೆಗಾರ ರಾಜು ಬಿ ಸುವರ್ಣ, ಕಾರ್ಯದರ್ಶಿ ಹರೀಶ್ ಪೂಜಾರಿ, ಕೋಶಾಧಿಕಾರಿ ರವಿ ಪೂಜಾರಿ ಮತ್ತು ಸರ್ವ ಸರ್ವಸದಸ್ಯರು ಉಪಸ್ಥಿತರಿದ್ದರು.