ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಡುಪಿಯ ಭುಜಂಗ ಪಾರ್ಕಿನಲ್ಲಿ ಕುಡುಕರ ಹಾವಳಿ.

Posted On: 22-06-2020 07:59PM

ಉಡುಪಿ, ಜೂ.22; ವಾಯು ವಿಹಾರ ತಾಣ ಅಜ್ಜರಕಾಡು ಹುತಾತ್ಮ ಸೈನಿಕರ ಸ್ಮಾರಕದ ಬಳಿ, ಕುಡುಕರು ಅಲ್ಲಲ್ಲಿ ಎಸೆದಿರುವ ಸಾವಿರಾರು ಮದ್ಯದ ಬಾಟಲಿಗಳನ್ನು ತೆರವುಗೊಳಿಸಲು ಜಿಲ್ಲಾ ನಾಗರಿಕ ಸಮಿತಿ ಹಾಗೂ ಸ್ವಚ್ಚ ಭಾರತ್ ಪ್ರೇಂಡ್ಸ್ ಇವರು ಸ್ವಚ್ಚತಾ ಕಾರ್ಯಕ್ರಮವನ್ನು ಸೋಮವಾರ ನಡೆಸಿದರು. ಜಂಟಿ ಸಮಿತಿಯ ಕಾರ್ಯಕರ್ತರು ಸುರಿಯುವ ಮಳೆಯಲ್ಲಿಯೇ ಬಾಟಲಿಗಳ ಒಟ್ಟುಗೂಡಿಸಿ ಆಯಾಕಟ್ಟಿನ ಸ್ಥಳಗಳಲ್ಲಿ ಸಂಗ್ರಹಿಸಿ ಇಟ್ಟಿದ್ದಾರೆ. ವಿಲೇವಾರಿಗೊಳಿಸಲು ಸಂಬಂಧಪಟ್ಟವರಿಗೆ ತಿಳಿಸಿಟ್ಟಿದ್ದಾರೆ. ಸ್ವಚ್ಚತಾ ಸೇವಾಕಾರ್ಯದಲ್ಲಿ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಸಹಸಂಚಾಲಕ ತಾರಾನಾಥ್ ಮೇಸ್ತ ಶಿರೂರು, ಹಾಗೂ ಸ್ವಚ್ಚ ಭಾರತ ಪ್ರೇಂಡ್ಸ್ ಸಂಯೋಜಕ ರಾಘವೇಂದ್ರ ಪ್ರಭು, ಕರ್ವಾಲು, ಜೇಸಿ ಉಡುಪಿ ಸಿಟಿ ಪೂರ್ವಾದ್ಯಕ್ಷ ಜಗದೀಶ್ ಶೆಟ್ಟಿ , ಉದಯ ನಾಯ್ಕ ಪಾಲ್ಗೊಂಡಿದ್ದರು. ಅಜ್ಜರಕಾಡು ಭುಜಂಗ ಪಾರ್ಕ್ ಇದೊಂದು ನಗರದ ಏಕೈಕ ವಾಯುವಿಹಾರ ತಾಣ. ಇಲ್ಲಿಗೆ ಹಿರಿಯ ನಾಗರಿಕರು, ಚಿಕ್ಕ ಮಕ್ಕಳು, ವಾಯು ವಿಹಾರಿಗಳು ಬರುತ್ತಾರೆ. ಇಲ್ಲಿ ಕುಡುಕುರ ಹಾವಳಿಯಿಂದಾಗಿ ಸಾರ್ವಜನಿಕರು ಭಯಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ಅವಕಾಶ ಇಲ್ಲದಿದ್ದರೂ ಇಲ್ಲಿ ಕಾನೂನಿಗೆ ವಿರುದ್ಧವಾಗಿ ರಾತ್ರಿಯ ಹೊತ್ತಿನಲ್ಲಿ ಮದ್ಯಗೋಷ್ಠಿಗಳು ನಡೆಯುತ್ತಿವೆ. ಹುತಾತ್ಮ ಸೈನಿಕರ ಸ್ಮಾರಕದ ವಠಾರದಲ್ಲಿ ಇಂತಹ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವುದು ಮಹಾ ಅಪರಾಧವಾಗಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಬೇಸರ ವ್ಯಕ್ತವಾಗಿದೆ. ನಗರಡಾಳಿತ ಜಿಲ್ಲಾಡಳಿತವು ಅಜ್ಜರಕಾಡು ಪಾರ್ಕಿಗೆ ಕಾವಲುಗಾರನ ವ್ಯವಸ್ಥೆ, ಪೊಲೀಸ್ ಗಸ್ತು, ಬೆಳಕಿನ ವ್ಯವಸ್ಥೆಗಳೊಂದಿಗೆ ಇಲ್ಲಿಗೆ ಬರುವ ಸಾರ್ವಜನಿಕರಿಗೆ ಸುರಕ್ಷೆ ಒದಗಿಸಬೇಕೆಂದು ಜಂಟಿ ಸಂಘಟನೆಯ ಕಾರ್ಯಕರ್ತರು ಆಗ್ರಹಿಸಿದ್ದಾರೆ.