ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ದ್ವಿಚಕ್ರ ವಾಹನ ಸವಾರರಿಗೆ ತೊಂದರೆ : ಹೆದ್ದಾರಿ ಇಲಾಖೆ ನಿರ್ಲಕ್ಷ್ಯ

Posted On: 01-12-2022 05:52PM

ಪಡುಬಿದ್ರಿ : ಹಾಳಾದ ರಸ್ತೆಯನ್ನು ಸರಿ ಮಾಡದೆ ಸರಿ ಇದ್ದ ರಸ್ತೆಯನ್ನು ಯಂತ್ರದ ಮೂಲಕ ಡಾಂಬರು ತೆಗೆದು ಜೊತೆಗೆ ಡಾಂಬರು ಹುಡಿಯು ರಸ್ತೆಯಲ್ಲೇ ಇದ್ದು ದ್ವಿಚಕ್ರ ವಾಹನ ಸವಾರರಿಗೆ ತೊಂದರೆಯಾಗುವ ಸ್ಥಿತಿ ಪಡುಬಿದ್ರಿ ಸಮೀಪದ ಕಣ್ಣಂಗಾರುವಿನಿಂದ ಬೀಡುವರೆಗೆ ಒಂದು ಬದಿಯ ರಸ್ತೆಯಲ್ಲಿ ಕಾಣಬಹುದಾಗಿದೆ.

ಇದೇ ಭಾಗಲ್ಲಿ ಒಂದೆಡೆ ವಿರುದ್ಧ ದಿಕ್ಕಿನಿಂದ ಬರುವ ವಾಹನಗಳು ಮತ್ತೊಂದೆಡೆ ರಸ್ತೆಯ ಈ ಸ್ಥಿತಿ ಜೊತೆಗೆ ಡಾಂಬರು ಹುಡಿ ದ್ವಿಚಕ್ರ ವಾಹನ ಸವಾರರಿಗೆ ತೊಂದರೆಯಾಗಿದೆ. ರಾತ್ರಿ ವೇಳೆ ಇಂತಹ ಸ್ಥಿತಿ ಅಪಾಯಕಾರಿ ಆದಷ್ಟು ಬೇಗ ಡಾಂಬರೀಕರಣವಾಗಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.