ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಂಕರಪುರ : ನಶಾ ಮುಕ್ತ ಅಭಿಯಾನ

Posted On: 02-12-2022 09:33AM

ಶಂಕರಪುರ : ಭಾರತೀಯ ವೈದ್ಯಕೀಯ ಸಂಘ ಉಡುಪಿ ಹಾಗೂ ರೋಟರಿ ಕ್ಲಬ್ ಶಂಕರಪುರ ಜಂಟಿಯಾಗಿ ನಶಾ ಮುಕ್ತ ಅಭಿಯಾನ ಕಾರ್ಯಕ್ರಮವನ್ನು ಸೈಂಟ್ ಜಾನ್ಸ್ ಪಿಯು ಕಾಲೇಜ್ ಶಂಕರಪುರದಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಡಾ. ಪಿ ವಿ ಭಂಡಾರಿ ಭಾರತೀಯ ವೈದ್ಯಕೀಯ ಸಂಘ ಉಡುಪಿ ನಡೆಸಿಕೊಟ್ಟರು.

ಐ ಎಂ ಎ ಕಾರ್ಯದರ್ಶಿ ಡಾ. ಕೇಶವ ನಾಯಕ್, ರೋಟರಿ ದಂಡಪಾಣಿ ಜಾರ್ಜ್ ಡಿಸಿಲ್ವ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 180 ಮಕ್ಕಳು, ಶಿಕ್ಷಕರು, ರೋಟರಿಯ ಸದಸ್ಯರು, ಉಪಸ್ಥಿತರಿದ್ದರು.

ಸಭಾಧ್ಯಕ್ಷ ಸ್ಥಾನವನ್ನು ವಹಿಸಿದ ಸೈಂಟ್ ಜಾನ್ಸ್ ಪಿಯು ಕಾಲೇಜ್ ಶಂಕರಪುರದ ಪ್ರಾಂಶುಪಾಲರಾದ ಪ್ರಿಯಾ ಕೆ ಡೇಸಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರೋಟರಿ ಅಧ್ಯಕ್ಷ ಗ್ಲಾಡಸನ್ ಕುಂದರ್ ಸ್ವಾಗತಿಸಿದರು. ಕಾರ್ಯದರ್ಶಿ ಸಿಲ್ವಿಯಾ ಕಸ್ಟಲೀನೋ ವಂದಿಸಿದರು.