ಯುವವಾಹಿನಿ ಪಡುಬಿದ್ರಿ ಘಟಕ : ಮಕ್ಕಳ ಹಬ್ಬ - ಕಲಾಶ್ರೀ, ಕಲಾರತ್ನ ಪ್ರಶಸ್ತಿ ಪ್ರದಾನ
Posted On:
02-12-2022 10:28AM
ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸೃತ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ ಕೆಮುಂಡೇಲು ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಮಕ್ಕಳ ಹಬ್ಬ, ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವು ನವೆಂಬರ್ 20ರಂದು ಕೆಮುಂಡೇಲು ಶ್ರೀ ಪಾಂಡುರಂಗ ಭಜನಾ ಮಂಡಳಿ (ರಿ.) ಕೆಮುಂಡೇಲು ಇಲ್ಲಿ ಜರುಗಿತು.
ಪುತ್ತಿಗೆ ಮಠ ಉಡುಪಿಯ ದಿವಾನರಾದ ನಾಗರಾಜ ಆಚಾರ್ಯ ಕಾರ್ಯಕ್ರಮ ಉದ್ಘಾಟಿಸಿದರು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಉಪಾಧ್ಯಕ್ಷರಾದ ಶಶಿಕಲಾ ಯಶೋಧರ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಜೆಸಿಐ ಪಡುಬಿದ್ರಿ ಅಧ್ಯಕ್ಷ ಶರತ್ ಶೆಟ್ಟಿ,
ರಿಲಾಯನ್ಸ್ ಇನ್ಫೋಕಾಂ. ಲಿಮಿಟೆಡ್ ಸೀನಿಯರ್ ಮೆನೇಜರ್ ರಮೇಶ್ ಪಿ. ಬಿ., ಶ್ರೀ ಪಾಂಡುರಂಗ ಭಜನಾ ಮಂಡಳಿ ಕೆಮುಂಡೇಲು ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿಗಾರ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಶಾಂತಿ ಎಸ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಶ್ಯಾಮಲಾ ನಾಗರತ್ನ ರಾವ್, ಶಾಲಾ ವಿದ್ಯಾರ್ಥಿ ನಾಯಕ ಶ್ರೇಯಸ್ ಉಪಸ್ಥಿತರಿದ್ದರು.
ಉದ್ಗಾಟನಾ ಸಮಾರಂಭದ ನಂತರ ಮಕ್ಕಳಿಗಾಗಿ ಅಭಿನಯ ಗೀತೆ, ಚಿತ್ರಕಲಾ ಸ್ಪರ್ಧೆ, ಛದ್ಮವೇಷ , ಕಥೆಹೇಳುವ ಸ್ಪರ್ಧೆ, ಭಾಷಣ ಸ್ಪರ್ಧೆ,ಚಿತ್ರಕಲಾ ಸ್ಪರ್ಧೆ, ಛದ್ಮವೇಷ, ರಸಪ್ರಶ್ನೆ ಸಮೂಹ ನೃತ್ಯ, ಪ್ರಬಂಧ ಸ್ಪರ್ಧೆ ನಡೆಯಿತು.
ಸಮಾರೋಪ ಸಮಾರಂಭ: ಘಟಕದ ಉಪಾಧ್ಯಕ್ಷರಾದ ಅಶ್ವಥ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಅಧ್ಯಕ್ಷ ಉದಯ ಅಮೀನ್ ಮಟ್ಟು, ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್, ಬಿ. ಜೆ. ಪಿ. ಉಡುಪಿ ಜಿಲ್ಲೆ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಸಂಘಟನಾ ಕಾರ್ಯದರ್ಶಿ
ಚಿತ್ರಾಕ್ಷಿ ಕೆ. ಕೋಟ್ಯಾನ್, ಕೆಮುಂಡೇಲು ಶ್ರೀ ಪಾಂಡುರಂಗ ಭಜನಾ ಮಂಡಳಿ (ರಿ.) ಕೆಮುಂಡೇಲು ಕಾರ್ಯದರ್ಶಿ ಕೃಷ್ಣಾನಂದ ರಾವ್,
ಕೆಮುಂಡೇಲು ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಪ್ರಭಾರ ಮುಖ್ಯೋಪಾಧ್ಯಾಯ ಜಗನ್ನಾಥ ಶೆಟ್ಟಿ, ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಕಾರ್ಯದರ್ಶಿ ಡಾ. ಐಶ್ವರ್ಯ ಸಿ. ಅಂಚನ್ ಉಪಸ್ಥಿತರಿದ್ದರು.
ಸನ್ಮಾನ, ಪ್ರಶಸ್ತಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಸಂಸ್ಥೆಗೆ ಕೆಮುಂಡೇಲು ಶ್ರೀ ಪಾಂಡುರಂಗ ಭಜನಾ ಮಂಡಳಿ (ರಿ.) ಕೆಮುಂಡೇಲು ಇವರ ವತಿಯಿಂದ ಸನ್ಮಾನ ನೆರವೇರಿತು.
ಧೀರಜ್ ಯು ಆಚಾರ್ಯ ಕಲಾಶ್ರೀ ಪ್ರಶಸ್ತಿ,
ಓಂಕಾರ್ ಎಸ್ ಜೋಗಿ ಕಲಾರತ್ನ ಪ್ರಶಸ್ತಿ ಮುಡಿಗೇರಿಸಿಕೊಂಡರು.
ಘಟಕದ ಉಪಾಧ್ಯಕ್ಷರಾದ ಅಶ್ವಥ್ ಸ್ವಾಗತಿಸಿದರು. ಘಟಕದ ಮಾಜಿ ಅಧ್ಯಕ್ಷರಾದ ಸುಜಿತ್ ಪ್ರಸ್ತಾವಿಸಿದರು. ಸ್ಪರ್ಧಾ ವಿಜೇತರ ಪಟ್ಟಿಯನ್ನು ರವಿರಾಜ್ ಎನ್ ಕೋಟ್ಯಾನ್ ವಾಚಿಸಿದರು. ಯಶೋದ ಮತ್ತು ತೃಪ್ತಿ ಕಾರ್ಯಕ್ರಮ ನಿರೂಪಿಸಿದರು. ಡಾ. ಐಶ್ವರ್ಯ ಸಿ ಅಂಚನ್ ವಂದಿಸಿದರು.