ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಗೆದ್ದ ಮೇಲೆ ಯಾವುದೇ ಪಕ್ಷ ಬದಲಾಯಿಸುವುದಿಲ್ಲ ಎಂದು ಅಫಿಡವಿಟ್ ಪಡೆದುಕೊಳ್ಳುವ ಕಾನೂನು ರೂಪುಗೊಳ್ಳಬೇಕಿದೆ : ಜಸ್ಟಿಸ್ ಅರಳಿ ನಾಗರಾಜ್

Posted On: 02-12-2022 11:49AM

ಮಂಗಳೂರು : ಚುನಾವಣೆ ಸಂದರ್ಭದಲ್ಲಿ ಪ್ರತಿಯೊಬ್ಬ ಸ್ಪರ್ಧಿಯಲ್ಲೂ ನಾನು ಗೆದ್ದು ಬಂದಮೇಲೆ ಯಾವುದೇ ಪಕ್ಷ ಬದಲಾಯಿಸುವುದಿಲ್ಲ ಎಂದು ಅಫಿಡವಿಟ್ ಪಡೆದು ಕೊಳ್ಳುವ ಕಾನೂನು ರೂಪುಗೊಳ್ಳಬೇಕಿದೆ ಎಂದು ಜಸ್ಟಿಸ್ ಅರಳಿ ನಾಗರಾಜ್ ಹೇಳಿದರು. ಅವರು ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಮತ್ತು ರಾಷ್ಟ್ರೀಯ ಸೌಹಾರ್ದ ವೇದಿಕೆ ಬಿಜಾಪುರ ಜಂಟಿ ಆಶ್ರಯದಲ್ಲಿ ಡಿಸೆಂಬರ್ 1ರಂದು ಬಿಜಾಪುರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ ದಲ್ಲಿ ಆಯೋಜಿಸಿದ್ದ "ಸಂವಿಧಾನದ ಆಶಯ ಈಡೇರಿದೆಯೇ? " - ವಿಚಾರ ಗೋಷ್ಠಿ ಯನ್ನು ಉದ್ದೇಶಿಸಿ ಮಾತನಾಡಿದರು.

ದೇಶ ನನಗೇನು ಕೊಟ್ಟಿದೆ ಎಂಬುದು ಮುಖ್ಯವಲ್ಲ ದೇಶಕ್ಕಾಗಿ ನಾನೇನು ಕೊಡಬಲ್ಲೆ ಎಂಬುದು ಮುಖ್ಯ , ಸ್ವಾತಂತ್ರ್ಯ ಪೂರ್ವಕ್ಕೆ ದೇಶ ಪ್ರೇಮ ಇತ್ತು . ಇತ್ತೀಚೆಗೆ ಸ್ವಾರ್ಥ ಪ್ರೇಮ ಹೆಚ್ಚಾಗಿದೆ. ಈ ಕಾರಣದಿಂದಾಗಿಯೇ ಇಂದು ಒಂದು ಪಕ್ಷ ಸೇರಿ ಗೆದ್ದುಬಂದವರು ಅವರಿಗೆ ಬೇಕಾದಂತೆ ಪಕ್ಷ ಬದಲಿಸಿ ಗೆಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಂವಿಧಾನದ ಆಶಯ ಈಡೇರಿದೆಯೋ ಇಲ್ಲವೋ ಎಂಬ ಪ್ರಶ್ನೆ ತಮ್ಮ ಮುಂದೆ ಇಡುತ್ತೇನೆ, ಮೂಕ ಪ್ರೇಕ್ಷಕನಾಗದೆ ಪ್ರಶ್ನೆಗಳನ್ನು ಕೇಳುವ ಮನಸ್ಥಿತಿ ಬೆಳೆಸಿಕೊಳ್ಳಬೇಕು, ಬ್ಯಾಂಕ್ ಬಾಲನ್ಸ್ ಮೊಬೈಲ್ನಲ್ಲಿ ನೋಡಿಕೊಳ್ಳ ಬಹುದು. ಆಯಸ್ಸು ಎಷ್ಟು ಎಂಬುದು ತಿಳಿದುಕೊಳ್ಳಲು ಸಾಧ್ಯವಿಲ್ಲ ಈ ನಿಟ್ಟಿನಲ್ಲಿ ಯುವಜನತೆ ಅಲೋಚಿಸಬೇಕಿದೆ ಎಂದು ಜಸ್ಟಿಸ್ ಅರಳಿ ನಾಗರಾಜ್ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಸ್ಟಿಸ್ ವಸಂತ ಮುಳಸಾವಳಗಿ ಮಾತನಾಡಿ ಸಂವಿದಾನದ ಆಶಯಗಳು ಸ್ಪಷ್ಟವಾಗಿವೆ ಮತ್ತು ನಿಖರವಾಗಿವೆ. ಅವುಗಳನ್ನು ಜಾರಿಗೊಳಿಸುವ ನಮ್ಮ ವ್ಯವಸ್ಥೆ ಎಡವುತ್ತಿರುವುದರಿಂದ ಸಂವಿದಾನದ ಆಶಯ ಈಡೇರಿದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬೇಕಾದರೆ ಯುವಜನತೆ ಜಾಗೃತರಾಗಿ ಕರ್ತವ್ಯ ನಿರ್ವಹಿಸಬೆಕಾಗಿದೆ.

ವೇದಿಕೆಯಲ್ಲಿ ಹಿರಿಯ ನ್ಯಾಯವಾದಿ ಮತ್ತು ಸಾಹಿತಿ ವಿದ್ಯಾವತಿ ಅಂಕಲಗಿ, RSV ಸಂಸ್ಥಾಪಕಿ ರಾಜೇಶ್ವರಿ ಹಿಪ್ಪರಗಿ, ನಿರ್ದೇಶಕ ಜೆ.ಎಸ್. ಪಾಟೀಲ್, ಅಧ್ಯಕ್ಷ ಚಂದ್ರಶೇಖರ ಘಂಟಪ್ಪಗೋಳ, ಕಾರ್ಯದರ್ಶಿ ಫಯಾಜ್ ಕಲಾದಗಿ ಮುಂತಾದವರು ಉಪಸ್ಥಿತರಿದ್ದರು. ಮಣಿಕಂಠ ಮಠಪತಿಯವರು ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು. ಚಂದ್ರಶೇಖರ ಘಂಟಪ್ಪಗೋಳ ಸ್ವಾಗತಿಸಿ NSCDF ಅಧ್ಯಕ್ಷ ಗಂಗಾಧರ್ ಗಾಂಧಿ ಪ್ರಸ್ತಾವನೆಗೈದರು. ರೋಹಿಣಿ ಕುಲಕರ್ಣಿ ಕಾರ್ಯಕ್ರಮ ನಿರ್ವಹಿಸಿದರು.