ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಜಿ. ಜಗದೀಶ್ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ

Posted On: 04-12-2022 06:50PM

ಉಚ್ಚಿಲ : ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಜಿ. ಜಗದೀಶ್ ಇಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರದರ್ಶನ ಪಡೆದರು.

ದ. ಕ. ಮೊಗವೀರ ಮಹಾಜನ ಸಂಘ ರಿ. ಉಚ್ಚಿಲ ಇದರ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್ ಅವರನ್ನು ಬರ ಮಾಡಿಕೊಂಡರು.

ಈ ಸಂಧರ್ಭದಲ್ಲಿ ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ಶಂಕರ್ ಸಾಲ್ಯಾನ್, ದಿನೇಶ್ ಮುಳೂರು, ರಾಘವೇಂದ್ರ ಸುವರ್ಣ ಬೈಕಾಡಿ, ವಿಷ್ಣುಮೂರ್ತಿ ಉಪಾಧ್ಯಾಯ, ಶೇಖರ್ ಪುತ್ರನ್, ಸತೀಶ್ ಅಮೀನ್ ಪಡುಕರೆ ಮುಂತಾದವರು ಉಪಸ್ಥಿತರಿದ್ದರು.