ಕಾರ್ಕಳ :ಮುಂಡ್ಕೂರು ನಾನಿಲ್ತಾರ್ ಕುಲಾಲ ಸಂಘದ 34ನೇ ವರ್ಷದ ವಾರ್ಷಿಕ ಮಹಾಸಭೆ, ಶ್ರೀ ಸತ್ಯನಾರಾಯಣ ಪೂಜೆ, ಅಭಿನಂದನ ಕಾರ್ಯಕ್ರಮ, ವೈದಕೀಯ ನೆರವು, ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ ಬುಧವಾರ ಕುಲಾಲ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಕುಶ ಆರ್ ಮೂಲ್ಯ ಅಧ್ಯಕ್ಷತೆಯಲ್ಲಿ ಜರಗಿತು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಜಯರಾಮ್ ಕುಲಾಲ್, ಜಗನಾಥ್ ಮೂಲ್ಯ, ಸಂತೋಷ್ ಕುಲಾಲ್, ಲೋಕೇಶ್ ಕುಲಾಲ್, ದೀಪಕ್ ಬೆಳ್ಮಣ್ ಉಪಸ್ಥಿತರಿದ್ದರು.