ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು ವಾಹನದ ವ್ಯವಸ್ಥೆ ಕಲ್ಪಿಸಿದ ಕಾಪುವಿನ ಮರ್ಣೆಯ ತಂಡ

Posted On: 25-06-2020 02:43PM

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮರ್ಣೆ ಕನರಾಡಿ ಕೊಡಂಗಳ ಕರ್ವಾಲು ಇವರ ವತಿಯಿಂದ ಉಚಿತ ವಾಹನದ ವ್ಯವಸ್ಥೆ. ಕಾಪು:(ಜೂನ್25) ವಿದ್ಯಾರ್ಥಿ ಜೀವನದ ಅತ್ಯಮೂಲ್ಯ ಘಟ್ಟ ಆಗಿರುವಂತಹ ಎಸ್.ಎಸ್.ಎಲ್.ಸಿ. ಯ ವಾರ್ಷಿಕ ಪರೀಕ್ಷೆ ನಡೆಯುತ್ತಿದ್ದು ಎಲ್ಲಾ ವಿದ್ಯಾರ್ಥಿಗಳಿಗೆ ಶುಭಹಾರೈಕೆಗಳನ್ನು ಸಲ್ಲಿಸುತ್ತಿದ್ದೇವೆ. ಕೊರೊನ ಸಮಯದಲ್ಲಿ ಇನ್ನೂ ಸರಿಯಾಗಿ ಬಸ್ ಇಲ್ಲದ ಕರ್ವಾಲು ಕೊಡಂಗಳ ಮರ್ಣೆ ಅಲೆವೂರಿಗೆ ನಮ್ಮ "ಸಾರ್ವಜನಿಕ ಗಣೇಶೋತ್ಸವ ಸಮಿತಿ ಮರ್ಣೆ ಕನರಾಡಿ ಕೊಡಂಗಳ ಕರ್ವಾಲು" ಇದರ ವತಿಯಿಂದ ವಿದ್ಯಾರ್ಥಿಗಳು ಹಾಗೂ ಪೋಷಕರ ಹಿತದೃಷ್ಟಿಯಿಂದ ಊರಿನ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆ ಆಗಬಾರದೆಂದು ಪ್ರಜ್ವಲ್ ಹೆಗ್ಡೆ ಮರ್ಣೆ ಇವರ ಮುತುವರ್ಜಿಯಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪರವಾಗಿ ವಾಹನ ಸೌಕರ್ಯ ಮಾಡಿದ್ದು ಇಂದು ಬೆಳಿಗ್ಗೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಕರ್ವಾಲು ಮತ್ತು ರಂಜಿತ್ ನಾಯಕ್ ಕನರಾಡಿ ಇವರೊಂದಿಗೆ ಬಸ್ಸಿನ ತನಕ ಹೋಗಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.