ಕಾಪು : ಇಲ್ಲಿನ ಲಕ್ಷ್ಮೀ ಜನರಲ್ ಸ್ಟೋರ್ಸ್ ನಲ್ಲಿ ನಂದಿನಿ ಸಿಹಿ ಉತ್ಪನ್ನಗಳ ಮಾರಾಟಕ್ಕೆ ಕರ್ನಾಟಕ ರಾಜ್ಯ ಹಾಲು ಮಹಾಮಂಡಳ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು ಡಿಸೆಂಬರ್ 18 ರಿಂದ ಜನವರಿ 18 ರವರೆಗೆ ನಂದಿನಿ ಸಿಹಿ ಉತ್ಸವ ಜರಗಲಿದೆ. ನಂದಿನಿ ಸಿಹಿ ಉತ್ಪನ್ನಗಳಿಗೆ ಶೇ. 20 ರಿಯಾಯಿತಿ ದೊರೆಯಲಿದೆ ಇದರ ಸದುಪಯೋಗ ಸಾರ್ವಜನಿಕರು ಪಡೆಯಬಹುದು. ಸಿಹಿ ಉತ್ಪನ್ನಗಳ ಮಾರಾಟದ ಮೂಲಕ ಇದ್ದ ಗ್ರಾಹಕರನ್ನು ಉಳಿಸಿ ಹೊಸ ಗ್ರಾಹಕರನ್ನು ಸೆಳೆಯುವುದು. ಕರ್ನಾಟಕ ರಾಜ್ಯದಲ್ಲಿಯ 58 ಬಗೆಯ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತದೆ. ಪ್ರತಿವರ್ಷದಂತೆ ಈ ವರ್ಷವೂ ಕೂಡ ಸಿಹಿ ಉತ್ಸವ ಮಾಡಲಾಗುತ್ತಿದೆ ಎಂದರು.
ಈ ಸಂದರ್ಭ ದಕ್ಷಿಣ ಕನ್ನಡ ಹಾಲು ಮಹಾಮಂಡಲ ಇದರ ಉಪ ವ್ಯವಸ್ಥಾಪಕರಾದ ಸುಧಾಕರ್, ಕೆಎಂಎಫ್ ಪ್ರಭಾರ ಜಂಟಿ ನಿರ್ದೇಶಕ ರಮೇಶ್ ಬೂದಗತ್ತಿ, ಕೆಎಂಎಫ್ ಮಾರ್ಕೆಟಿಂಗ್ ಆಫೀಸರ್ ಸಿ ಎಚ್ ಮೋಹನ್, ಉದ್ಯಮಿ ಕೆ ಕಮಲಾಕ್ಷ ನಾಯಕ್, ಮಹಾಲಕ್ಷ್ಮಿ ಟ್ರೇಡರ್ಸ್ ನ ಹರೀಶ್ ಕೆ ನಾಯಕ್, ಅನುಪೂರ್ವಿ ಸಮೂಹ ಸಂಸ್ಥೆಯ ಪ್ರವರ್ತಕರಾದ ಪ್ರೀತಿ ನಾಯಕ್, ದಕ್ಷಿಣ ಕನ್ನಡ ಹಾಲು ಒಕ್ಕೂಟದ ಮಾರ್ಕೆಟಿಂಗ್ ಆಫೀಸರ್ ಸಂದೀಪ್, ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯವಸ್ಥಾಪಕ ರವಿರಾಜ್ ಉಡುಪ ಮತ್ತಿತರರು ಉಪಸ್ಥಿತರಿದ್ದರು.