ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ತ್ಯಾಜ್ಯ ನಿರ್ವಹಣೆ ಕುರಿತ ಕಿರುಚಿತ್ರ ಸಲ್ಲಿಕೆಗೆ ಅವಕಾಶ

Posted On: 29-12-2022 08:47PM

ಉಡುಪಿ : ಜಿಲ್ಲಾ ಪಂಚಾಯತ್ನ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಜಿಲ್ಲೆಯಲ್ಲಿ ಸಮಗ್ರ ತ್ಯಾಜ್ಯ ನಿರ್ವಹಣೆ ಚಟುವಟಿಕೆ ಅನುಷ್ಠಾನವಾಗುತ್ತಿದ್ದು, ಒಣಕಸ ಹಾಗೂ ಹಸಿಕಸ ನಿರ್ವಹಣೆಯನ್ನು ಮಾಡಲಾಗುತ್ತಿದೆ. ಈ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ತಲಾ 5 ನಿಮಿಷಗಳ ಅವಧಿಯ 3 ಕಿರುಚಿತ್ರಗಳನ್ನು ತಯಾರಿಸಲು ಅವಕಾಶ ಕಲ್ಪಿಸಲಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್ ಕಚೇರಿ ಅಥವಾ ಮೊ.ನಂ: 9964443064 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.