ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಸೈಂಟ್ ಜಾನ್ಸ್ ಶಂಕರಪುರ ಶಾಲೆಯಲ್ಲಿ ಜೆಸಿಐ ಶಂಕರಪುರ ಜಾಸ್ಮಿನ್ ವತಿಯಿಂದ ಮಾಹಿತಿ ಕಾರ್ಯಾಗಾರ

Posted On: 15-01-2023 11:52AM

ಕಾಪು : ಜೆಸಿಐ ಶಂಕರಪುರ ಜಾಸ್ಮಿನ್ ಇವರ ವತಿಯಿಂದ ವಿವೇಕಾನಂದರ ಜನ್ಮದಿನದ ಅಂಗವಾಗಿ ಸೈಂಟ್ ಜಾನ್ಸ್ ಶಂಕರಪುರ ಇಲ್ಲಿಯ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗಾಗಿ ಮಾದಕ ದ್ರವ್ಯ, ಡ್ರಗ್ಸ್ ಬಗ್ಗೆ ಮಾಹಿತಿಯನ್ನು ಜೆಸಿಐ ಇಂಡಿಯಾ ತರಬೇತುದಾರರು ಆದ ಪಿಪಿಪಿ ಜೆಸಿ ರಾಕೇಶ್ ಕುಂಜೂರು ನೀಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಶಂಕರಪುರದ ಅಧ್ಯಕ್ಷರಾದ ಜೆಸಿ ಮಾಲಿನಿ ಶೆಟ್ಟಿ ವಹಿಸಿದ್ದರು.

ಕಾರ್ಯಕ್ರಮದ ವೇದಿಕೆಯಲ್ಲಿ ಕನ್ನಡ ಮಾಧ್ಯಮದ ಮುಖ್ಯೋಪಾಧ್ಯಾಯರಾದ ಅಶ್ವಿನ್ ರೋಡ್ರಿಗಸ್, ವಿದ್ಯಾರ್ಥಿ ನಾಯಕಿ ಮರೀನಾ ಕ್ರಾಸ್ಟ, ಜೆಸಿ ಶಂಕರಪುರದ ಪೂರ್ವ ಅಧ್ಯಕ್ಷೆ ಸೀಮಾಮಾರ್ಗರೇಟ್ ಉಪಸ್ಥಿತರಿದ್ದರು. ಅಧ್ಯಕ್ಷರು ಸ್ವಾಗತಿಸಿದರು. ಸಿಲ್ವಿಯಾ ಕಾಸ್ಟಲಿನೋ ಪ್ರಾರ್ಥಿಸಿದರು. ಜೆಸಿ ಸಂತೋಷ್ ಕುಮಾರ್ ವಂದಿಸಿದರು.