ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಜನವರಿ 21 : ಉಡುಪಿ ಜಿಲ್ಲೆಯ ರಜತ ಮಹೋತ್ಸವ - ಕಾಪು ಕಡಲ ಕಿನಾರೆಯಲ್ಲಿ ಸಭಾ, ಸಾಂಸ್ಕೃತಿಕ, ಸಂಗೀತ ರಸಮಂಜರಿ ಕಾರ್ಯಕ್ರಮ

Posted On: 20-01-2023 11:45PM

ಕಾಪು : ತಾಲೂಕು ಆಡಳಿತದ ವತಿಯಿಂದ ಉಡುಪಿ ಜಿಲ್ಲೆಯ ರಜತ ಮಹೋತ್ಸವದ ಅಂಗವಾಗಿ ಜನವರಿ 21, ಶನಿವಾರ ಅಪರಾಹ್ನ 2.30 ಗಂಟೆಯಿಂದ ಕಾಪು ಕಡಲ ಕಿನಾರೆಯಲ್ಲಿ ವಿವಿಧ ಕಾರ್ಯಕ್ರಮಗಳು ಜರಗಲಿವೆ.

ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಡಿ.ವಿ ಸದಾನಂದ ಗೌಡ ಉದ್ಘಾಟಿಸಲಿದ್ದಾರೆ.

ಅಪರಾಹ್ನ 2.30 ರಿಂದ 3.30 ರವರೆಗೆ ಸ್ತಬ್ಧ ಚಿತ್ರ ಮೆರವಣಿಗೆ ಕಾಪು ಪುರಸಭೆಯಿಂದ - ಕಾಪು ಪೇಟೆಯಾಗಿ - ಕಾಪು ಬೀಚ್ ಗೆ ಸಾಗಲಿದೆ. ಕಾಪು ಕಡಲ ಕಿನಾರೆಯಲ್ಲಿ ಅಪರಾಹ್ನ ಗಂಟೆ 3.30 ರಿಂದ 5 ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಜೆ 5 ಕ್ಕೆ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ, ಸಂಜೆ ಗಂಟೆ 6 ರಿಂದ ಖ್ಯಾತ ಸಂಗೀತ ನಿರ್ದೇಶಕರಾದ ಗುರುಕಿರಣ್ ಹಾಗೂ ತಂಡದವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ಜರಗಲಿದೆ.