ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಜೆಸಿಐ ಕಟಪಾಡಿ ವತಿಯಿಂದ ಟ್ರಾಫಿಕ್ ಪೋಲಿಸರಿಗೆ ಸನ್ಮಾನ

Posted On: 27-01-2023 05:59PM

ಕಟಪಾಡಿ : ಜೆಸಿಐ ಇಂಡಿಯಾ ಇದರ ವಲಯ 15ರ ಕಾರ್ಯಕ್ರಮ, ಕಟಪಾಡಿ ಘಟಕದ ವತಿಯಿಂದ ಸೆಲ್ಯೂಟ್ ದ ಸೈಲೆಂಟ್ ವರ್ಕರ್ ಕಾರ್ಯಕ್ರಮದ ಅಂಗವಾಗಿ ಗುರುವಾರ ಕಟಪಾಡಿ ಹೊರ ಠಾಣೆಯಲ್ಲಿ ಟ್ರಾಫಿಕ್ ಪೊಲೀಸರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಯಾಗಿ ಜೆಸಿಐ ಪೂರ್ವ ಅಧ್ಯಕ್ಷರಾದ ಡಾ.ಉದಯಕುಮಾರ್ ಶೆಟ್ಟಿ ಮತ್ತು ಪೂರ್ವ ವಲಯಧ್ಯಕ್ಷರಾದ ಹರಿಶ್ಚಂದ್ರ ಅಮೀನ್ ಭಾಗವಹಿಸಿದ್ದರು. ಜೆಸಿಐ ವಲಯ XVರ ಅಧ್ಯಕ್ಷರಾದ ಜ್ಯೋತಿ ಶಂಕರ್ ಅಧ್ಯಕ್ಷತೆ ವಹಿಸಿದ್ದರು.

ವಲಯಧಿಕಾರಿ ಪ್ರವೀಣ್ ಪೂಜಾರಿ, ಪೂರ್ವಧ್ಯಾಕ್ಷರಾದ ಮಹೇಶ್ ಅಂಚನ್, ಜಯಶ್ರೀ ಕೋಟ್ಯಾನ್, ಸುರೇಶ್ ಪೂಜಾರಿ, ಕಾರ್ಯದರ್ಶಿ ವಿಜೇತ್ ಪೂಜಾರಿ ಉಪಸ್ಥಿತರಿದ್ದರು. ಪ್ರವೀಣ್ ಜತ್ತನ್ ಕಾರ್ಯಕ್ರಮ ನಿರ್ವಹಿಸಿದರು.