ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಟಪಾಡಿ : ಪೇಟೆಬೆಟ್ಟು ಬಬ್ಬು ಸ್ವಾಮಿ ದೈವಸ್ಥಾನದ ಕೊರಗಜ್ಜ ಸನ್ನಿಧಿಗೆ ನಟಿ ಮೇಘ ಶೆಟ್ಟಿ ಭೇಟಿ

Posted On: 30-01-2023 01:24PM

ಕಟಪಾಡಿ : ಇಲ್ಲಿನ ಪೇಟೆಬೆಟ್ಟು ಬಬ್ಬು ಸ್ವಾಮಿ ದೈವಸ್ಥಾನದಲ್ಲಿನ ಕಾರ್ಣಿಕ ಪ್ರಸಿದ್ಧ ಕರಾವಳಿಯ ಅತ್ಯಂತ ನಂಬಿಕೆಯ ದೈವ ಕೊರಗಜ್ಜ ಸನ್ನಿಧಿಗೆ ಭಾನುವಾರ ಜೊತೆ ಜೊತೆಯಲಿ ಧಾರಾವಾಹಿಯ ನಾಯಕಿ ಮೇಘ ಶೆಟ್ಟಿ ಭೇಟಿ ನೀಡಿ, ಕೊರಗಜ್ಜನಲ್ಲಿ ಇಷ್ಟಾರ್ಥ ಸಿದ್ದಿಗೆ ಬೇಡಿಕೊಂಡರು.

ಮೇಘ ಶೆಟ್ಟಿಯವರು ಮಾಧ್ಯಮದವರೊಂದಿಗೆ ಮಾತನಾಡಿ, ಕಟಪಾಡಿ ಪೇಟೆಬೆಟ್ಟು ದೈವಸ್ಥಾನದಲ್ಲಿ ಕಾರ್ನಿಕ ಮೆರೆದ ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ್ದೇನೆ. ಇಲ್ಲಿಯ ಕಾರ್ಣಿಕದ ಬಗ್ಗೆ ಕೇಳಿ ತಿಳಿದಿದ್ದೇನೆ. ಆದ್ದರಿಂದ ಇಲ್ಲಿಗೆ ಭೇಟಿ ನೀಡಿ ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದರು.

ಈ ಸಂದರ್ಭ ಭಗವಾನ್ ಶ್ರೀ ಬಬ್ಬು ಸ್ವಾಮಿ ದೇವಸ್ಥಾನದ ಅಧ್ಯಕ್ಷರಾದ ಹರಿಶ್ಚಂದ್ರ ಪಿಲಾರ್, ತುಕಾರಾಂ ಉರ್ವ, ಗುರಿಕಾರರು ಮತ್ತು ಹತ್ತು ಸಮಸ್ತರು ಉಪಸ್ಥಿತಿ ಇದ್ದರು.