ಉಡುಪಿ : ಜಿಲ್ಲೆಯಲ್ಲಿ ನೆರವೇರಿದ 'ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ - ೨೦೨೩' ಈ ಸದವಸರದಲ್ಲಿ ಶ್ರೀಕ್ಷೇತ್ರ ಕಟೀಲಿನಿಂದ ಪ್ರಕಟವಾಗುವ "ಯಕ್ಷಪ್ರಭಾ ಪತ್ರಿಕೆ"ಯನ್ನು ಗೌರವಿಸಲಾಯಿತು.
ಪತ್ರಿಕೆಯ ಗೌರವ ಸಂಪಾದಕ ವಿದ್ವಾನ್ ಹರಿನಾರಾಯಣದಾಸ ಅಸ್ರಣ್ಣ ಹಾಗೂ ಸಂಪಾದಕ ಕೆ.ಎಲ್.ಕುಂಡಂತಾಯ ಅವರು ಗೌರವವನ್ನು ಸ್ವೀಕರಿಸಿದರು.
ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ, ಸಮ್ಮೇಳನಾಧ್ಯಕ್ಷ ಡಾ| ಎಂ. ಪ್ರಭಾಕರ ಜೋಶಿ, ಶಾಸಕ ಕೆ.ರಘುಪತಿ ಭಟ್, ಅಂಬಲಪಾಡಿ ದೇವಸ್ಥಾನದ ಧರ್ಮದರ್ಶಿ ಡಾ| ನಿ.ಬೀ. ವಿಜಯ ಬಲ್ಲಾಳ್, ಸಮ್ಮೇಳನ ಕಾರ್ಯಾಧ್ಯಕ್ಷ ಡಾ| ಜಿ.ಎಲ್. ಹೆಗಡೆ, ಹಿರಿಯ ಕಲಾವಿದರಾದ ಡಾ| ಕೋಳ್ಯೂರು ರಾಮಚಂದ್ರ ರಾವ್, ಪಾತಾಳ ವೆಂಕಟರಮಣ ಭಟ್ ಉಪಸ್ಥಿತರಿದ್ದರು.