ಕಾಪು : ತಾಲೂಕಿನ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಶ್ರೀ ದೇವಳದಲ್ಲಿ ಫೆಬ್ರವರಿ 18ರ ಸಂಜೆ ಗಂಟೆ 4 ರಿಂದ ಭಜನಾ ಸಂಕೀರ್ತನೆ ನಡೆಯಲಿದೆ.
ಸಂಜೆ ಗಂಟೆ 4 ರಿಂದ ಜಲಂಚಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ಭಜನಾ ಮಂಡಳಿ, ಸಂಜೆ ಗಂಟೆ 5 ರಿಂದ ಶಿರ್ವ ಶ್ರೀ ಮಹಾಲಾಸ ನಾರಾಯಣಿ ಭಜನಾ ಮಂಡಳಿ
ಸಂಜೆ ಗಂಟೆ 6 ರಿಂದ ಚಂದ್ರನಗರ ಶ್ರೀ ರಾಮ ಭಜನಾ ಮಂಡಳಿ, ರಾತ್ರಿ ಗಂಟೆ 7 ರಿಂದ ಕುತ್ಯಾರು ಗ್ರಾಮಸ್ಥರ ಭಜನಾ ಮಂಡಳಿ, ರಾತ್ರಿ ಗಂಟೆ 8 ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿಯವರಿಂದ ಭಜನಾ ಸಂಕೀರ್ತನೆ ನಡೆಯಲಿದೆ.
ನಂತರ ಸಣ್ಣ ರಂಗಪೂಜೆ ,ಫಲಾಹಾರ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕಳತ್ತೂರು ಪ್ರಕಟಣೆಯಲ್ಲಿ ತಿಳಿಸಿರುವರು.