ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಫೆಬ್ರವರಿ 18 : ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Posted On: 17-02-2023 09:30PM

ಕಾಪು : ತಾಲೂಕಿನ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಶ್ರೀ ದೇವಳದಲ್ಲಿ ಫೆಬ್ರವರಿ 18ರ ಸಂಜೆ ಗಂಟೆ 4 ರಿಂದ ಭಜನಾ ಸಂಕೀರ್ತನೆ ನಡೆಯಲಿದೆ.

ಸಂಜೆ ಗಂಟೆ 4 ರಿಂದ ಜಲಂಚಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ಭಜನಾ ಮಂಡಳಿ, ಸಂಜೆ ಗಂಟೆ 5 ರಿಂದ ಶಿರ್ವ ಶ್ರೀ ಮಹಾಲಾಸ ನಾರಾಯಣಿ ಭಜನಾ ಮಂಡಳಿ ಸಂಜೆ ಗಂಟೆ 6 ರಿಂದ ಚಂದ್ರನಗರ ಶ್ರೀ ರಾಮ ಭಜನಾ ಮಂಡಳಿ, ರಾತ್ರಿ ಗಂಟೆ 7 ರಿಂದ ಕುತ್ಯಾರು ಗ್ರಾಮಸ್ಥರ ಭಜನಾ ಮಂಡಳಿ, ರಾತ್ರಿ ಗಂಟೆ 8 ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿಯವರಿಂದ ಭಜನಾ ಸಂಕೀರ್ತನೆ ನಡೆಯಲಿದೆ.

ನಂತರ ಸಣ್ಣ ರಂಗಪೂಜೆ ,ಫಲಾಹಾರ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕಳತ್ತೂರು ಪ್ರಕಟಣೆಯಲ್ಲಿ ತಿಳಿಸಿರುವರು.