ಉಡುಪಿ : ಜಿಲ್ಲಾ ಜೆಡಿಎಸ್ ಪಕ್ಷ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಟಪಾಡಿಯ ಸಮಾಜ ಸೇವಕರಾದ ಜಯರಾಜ ಕಟಪಾಡಿ ಮತ್ತು ಸಂಗಡಿಗರು ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು.
ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ಜಯರಾಜ ಕಟಪಾಡಿ ಮತ್ತು ಸಂಗಡಿಗರಿಗೆ ಶಾಲು ಹೊದಿಸಿ ಪಕ್ಷದ ಧ್ವಜವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭ ರಾಜ್ಯ ಕಾರ್ಯದರ್ಶಿಗಳಾದ ಸುಧಾಕರ ಶೆಟ್ಟಿ, ಗಂಗಾಧರ ಬಿರ್ತಿ ಮತ್ತು ಮನ್ಸೂರ್ ಇಬ್ರಾಹಿಂ, ಜಿಲ್ಲಾ ಕಾರ್ಯಾಧ್ಯಕ್ಷರಾದ ವಾಸುದೇವ ರಾವ್, ನಾಯಕರಾದ ಸಂಕಪ್ಪ ಎ, ಬಾಲಕೃಷ್ಣ ಆಚಾರ್ಯ ಕಬ್ಬೆಟ್ಟು, ಇಕ್ಬಾಲ್ ಅತ್ರಾಡಿ, ಅಶ್ರಫ್ ಪಡುಬಿದ್ರಿ, ಸಂಜಯ್ ಕುಮಾರ್, ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.