ಕಾರ್ಕಳ : ಇಲ್ಲಿನ ಕುಲಾಲ ಸಂಘ, ಕುಲಾಲ ಯುವ ವೇದಿಕೆ ವತಿಯಿಂದ ಕಾರ್ಕಳ ತಾಲೂಕಿನ ಬಳಿ ಇರುವ ಸರ್ವಜ್ಞ ಸರ್ಕಲ್ ನ ಸರ್ವಜ್ಞನ ಮೂರ್ತಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಸರ್ವಜ್ಞ ಜಯಂತಿಯನ್ನು ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕುಲಾಲ ಸಂಘದ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಕುಲಾಲ್, ಕುಲಾಲ ಕುಂಬಾರ ಯುವ ವೇದಿಕೆ ಜಿಲ್ಲಾಧ್ಯಕ್ಷರಾದ ದಿವಾಕರ್ ಬಂಗೇರ, ಕಾರ್ಕಳ ಕುಲಾಲ ಯುವ ವೇದಿಕೆಯ ಅಧ್ಯಕ್ಷರಾದ ಉದಯ ಕುಲಾಲ್, ಮಹಿಳಾ ಘಟಕದ ಅಧ್ಯಕ್ಷರಾದ ಜ್ಯೋತಿ ಕುಲಾಲ್, ವಸಂತ ಕುಲಾಲ್, ಸುರೇಂದ್ರ ಕುಲಾಲ್ ವರಂಗ, ಹೃದಯ ಕುಲಾಲ್, ವಿಜೇಶ್ ಕುಲಾಲ್, ಮಹಿಳಾ ಮಂಡಲದ ಸದಸ್ಯರು, ಯುವ ವೇದಿಕೆಯ ಸದಸ್ಯರು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.