ಕಾಪು : ಫೆಬ್ರವರಿ 22ರಿಂದ 25 ರವರೆಗೆ ಪುನರ್ ಪ್ರತಿಷ್ಟೆ, ಬ್ರಹ್ಮಕಲಶೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ ನಡೆಯಲಿರುವ ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನಕ್ಕೆ ಬಂಜಾರ ಗ್ರೂಪ್ ಸಿಎಂಡಿ ಕೆ. ಪ್ರಕಾಶ್ ಶೆಟ್ಟಿ ಭೇಟಿ ನೀಡಿದರು.
ಈ ಸಂದರ್ಭ ಜೀರ್ಣೋದ್ಧಾರಕ್ಕೆ ಸಂಪೂರ್ಣ ಸಹಕಾರ ನೀಡಿ, ಸ್ವಾಗತ ಗೋಪುರದ ಪ್ರಾಯೋಜಕತ್ವ ವಹಿಸಿರುವ ಅವರನ್ನು
ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಐಕಳಭಾವ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಅವರು ಸನ್ಮಾನಿಸಿ, ಗೌರವಿಸಿದರು.
ಈ ಸಂದರ್ಭ ಗುತ್ತಿನಾರ್ ಯೋಗೀಶ್ ಶೆಟ್ಟಿ ಪಣಿಯೂರುಗುತ್ತು, ಸಂತೋಷ್ ಪಿ. ಶೆಟ್ಟಿ ತೆಂಕರಗುತ್ತು, ಹರೀಶ್ ನಾಯಕ್ ಕಾಪು, ಸುಕುಮಾರ್ ಶೆಟ್ಟಿ ನಡಿಮನೆ, ಉದಯ ಶೆಟ್ಟಿ ಪಡುಮನೆ, ರಾಕೇಶ್ ಕುಂಜೂರು, ಸತೀಶ್ ಶೆಟ್ಟಿ ಗುಡ್ಡೆಚ್ಚಿ, ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಸ್ಥಳವಂದಿಗರು ಉಪಸ್ಥಿತರಿದ್ದರು.