ಕಾಪು : ಬೆಳಪು ಗ್ರಾಮದ ಬಡಿಕೇರಿ ಪದ್ಮಶ್ರೀ ಮನೆಯ ವಠಾರದಲ್ಲಿ ಮಾರ್ಚ್ 8, ಬುಧವಾರ ಸಂಜೆ 5.30 ಕ್ಕೆ ಚೌಕಿ ಪೂಜೆ ಆರಂಭಗೊಳ್ಳುವುದರೊಂದಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರ ಶ್ರೀ ದೇವಿ ಮಹಾತ್ಮೆ (ಕಾಲಮಿತಿ ಯಕ್ಷಗಾನ) ಎಂಬ ಪ್ರಸಂಗ ನಡೆಯಲಿದೆ.
ಅಂದು ಸಂಜೆ 7.30 ರಿಂದ 8.30 ರವರೆಗೆ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಶ್ರೀಮತಿ ಸುಕನ್ಯಾ ಮತ್ತು ಶ್ರೀ ಹರಿರಾವ್ ಹಾಗೂ ಮಕ್ಕಳು ಬಡಿಕೇರಿ, ಮಲಂಗೋಳಿ ಪಣಿಯೂರು ಇವರು ಪ್ರಕಟಣೆಯಲ್ಲಿ ತಿಳಿಸಿರುವರು.