ಫೆಬ್ರವರಿ 25 : ಪಡುಬಿದ್ರಿ ಶ್ರೀ ಖಡ್ಗೇಶ್ವರಿ ಬ್ರಹ್ಮಸ್ಥಾನದಲ್ಲಿ ಢಕ್ಕೆಬಲಿ ಸೇವೆ
Posted On:
24-02-2023 11:30PM
ಪಡುಬಿದ್ರಿ : ಇಲ್ಲಿನ ಶ್ರೀ ಖಡ್ಗೇಶ್ವರಿ ಬ್ರಹ್ಮಸ್ಥಾನದಲ್ಲಿ ಅಂಗಡಿಗುತ್ತು ಸುಜಯ್ ಕುಮಾರ್ ಶೆಟ್ಟಿ , ಅವರಾಲು ಕಂಕಣಗುತ್ತು ಅಮೃತಾ ಎಸ್ ಶೆಟ್ಟಿ ಇವರ ಪರಿವಾರದಿಂದ ಫೆಬ್ರವರಿ 25, ಶನಿವಾರದಂದು ಢಕ್ಕೆಬಲಿ ಸೇವೆಯು ನಡೆಯಲಿದೆ.
ಆ ದಿನ ಮಧ್ಯಾಹ್ನ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಅನ್ನಸಂತರ್ಪಣೆ ಜರುಗಿ, ಸಂಜೆ 4 ಗಂಟೆಯಿಂದ ಫಲ ಪುಷ್ಪ ತಾಂಬೂಲಾ ಪರಿಕರ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ.
ಅನ್ನಸಂತರ್ಪಣೆ ಹಾಗೂ ಮೆರವಣಿಗೆಯಲ್ಲಿ ಭಾಗವಹಿಸಿ, ಈ ಪುಣ್ಯ ಸೇವೆಯಲ್ಲಿ ಭಕ್ತ ಮಹಾಶಯರೆಲ್ಲರೂ ಸಕಾಲದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿ ಶ್ರೀ ಖಡ್ಗೇಶ್ವರಿ ಅಮ್ಮನವರ ಕೃಪೆಗೆ ಪಾತ್ರರಾಗಬೇಕಾಗಿ ಸುಜಯ ಕುಮಾರ್ ಶೆಟ್ಟಿ ಹಾಗೂ ಅಮೃತಾ ಎಸ್ ಶೆಟ್ಟಿ, ಸಚಿ ಶೆಟ್ಟಿ, ಸವ್ಯ ಶೆಟ್ಟಿ, ಎಸ್. ಕೆ. ಎಸ್. ಕಾರ್ಕಳ ಇನ್ ಫ್ರಾ. ಪ್ರೈ. ಲಿ. ವತಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.