ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಬಂಟಕಲ್ಲು : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಮಂಜುನಾಥ್ ಮತ್ತು ಸದಾನಂದರಿಗೆ ಪಿಎಚ್‌ಡಿ ಪದವಿ

Posted On: 28-02-2023 06:43PM

ಬಂಟಕಲ್ಲು : ಇಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಮಂಜುನಾಥ್ ಎಸ್ ಇವರು ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ರಾಮಕೃಷ್ಣ ಎನ್ ಹೆಗ್ಡೆ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಡೆವಲಪ್‌ಮೆಂಟ್ ಆಫ್ ಎ ಡ್ಯುಯಲ್ ಸ್ಟಿಲ್೯ ಚೇಂಬರ್ ಫಾರ್ ಆ್ಯನ್ ಐಡಿ ಎಂಜಿನ್ ಆ್ಯಂಡ್ ಇನ್ವೆಸ್ಟಿಗೇಷನ್ ಆನ್ ಇಟ್ಸ್ ಇಫೆಕ್ಟ್ ಆನ್ ಎಂಜಿನ್ ಪರ್ಫಾರ್‌ಮೆನ್ಸ್ ಯುಸಿಂಗ್ ಎ ಬಯೋಡೀಸೆಲ್ ಬ್ಲೆಂಡ್" ಎಂಬ ಸಂಶೋಧನಾ ಪ್ರಬಂಧಕ್ಕೆ ಮತ್ತು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಸದಾನಂದ ಎಲ್ ಇವರು ಬ್ಯಾರೀಸ್‌ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ಬಿ ಅಜೀಜ್ ಮುಸ್ತಫ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಎಮ್ ಎಲ್ ಅಪ್ರೊಚಸಸ್ ಟವರ್ಡ್ಸ್ ಡಿಟೆಕ್ಟಿಂಗ್ ಆಂಡ್ರೈಡ್ ಸ್ಪೆಸಿಫಿಕ್ ಅಡ್ವಾನ್ಸ್‌ಡ್ ಮಾಲ್ವೇರ್ಸ್" ಎಂಬ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಪ್ರಾಧ್ಯಾಪಕರ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.